Webdunia - Bharat's app for daily news and videos

Install App

ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ ಗಂಡನ ಮರ್ಮಾಂಗ ಕತ್ತರಿಸಿದ ಹೆಂಡತಿ!

Webdunia
ಬುಧವಾರ, 15 ಡಿಸೆಂಬರ್ 2021 (13:11 IST)
ಪ್ರತಿ ರಾತ್ರಿಯೂ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದ ಗಂಡನ ಕಾಟ ತಾಳಲಾರದೆ ಕೋಪದಿಂದ ಹೆಂಡತಿ ತನ್ನ ಗಂಡನ ಮರ್ಮಾಂಗವನ್ನೇ ಕತ್ತರಿಸಿರುವ ವಿಚಿತ್ರ ಮತ್ತು ಆಘಾತಕಾರಿ ಘಟನೆ ಮಧ್ಯಪ್ರದೇಶದ ಟಿಕಮ್‌ಗಢದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗಂಡ ದಿನವೂ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದರಿಂದ ಆತನ ಹೆಂಡತಿ ಕಳೆದ ವಾರ ತನ್ನ 26 ವರ್ಷದ ಪತಿಯ ಜನನಾಂಗವನ್ನು ಕತ್ತರಿಸಿ ಹಾಕಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಜಾತಾರಾ ಪೊಲೀಸ್ ಠಾಣೆಯ ಉಸ್ತುವಾರಿ ತ್ರಿವೇಂದ್ರ ತ್ರಿವೇದಿ ನೀಡಿರುವ ಮಾಹಿತಿ ಪ್ರಕಾರ, ಒಬ್ಬ ವ್ಯಕ್ತಿ ಭಾನುವಾರ ಪೊಲೀಸ್ ಠಾಣೆಗೆ ಫೋನ್ ಮಾಡಿ ತನ್ನ ಹೆಂಡತಿ ತನ್ನ ಗುಪ್ತಾಂಗವನ್ನು ಕಟ್ ಮಾಡಿದ್ದಾಳೆ ಎಂದು ದೂರು ನೀಡಿದ್ದ. ನಾನು ನನ್ನ 24 ವರ್ಷದ ಹೆಂಡತಿ ಜೊತೆ ಲೈಂಗಿಕ ಕ್ರಿಯೆ ನಡೆಸಲು ಪ್ರಯತ್ನಿಸಿದಾಗ ಆಕೆ ನಿರಾಕರಿಸಿದಳು. ಬಲವಂತವಾಗಿ ಆಕೆಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಲು ಯತ್ನಿಸಿದ್ದರಿಂದ ನನ್ನ ಹೆಂಡತಿ ನನ್ನ ಮರ್ಮಾಂಗವನ್ನು ಕತ್ತರಿಸಿದ್ದಾಳೆ ಎಂದು ದೂರಿದ್ದ. ಈ ಹಿನ್ನೆಲೆಯಲ್ಲಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.ಡಿಸೆಂಬರ್ 7ರಂದು ಮಧ್ಯಪ್ರದೇಶದ ರಾಮನಗರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಅವರಿಬ್ಬರೂ 2019ರಲ್ಲಿ ಮದುವೆಯಾಗಿದ್ದರು. ಮದುವೆಯಾದ ಕೆಲವೇ ದಿನಕ್ಕೆ ಜಗಳ ಮಾಡಿಕೊಂಡಿದ್ದ ಅವರು ಕೆಲವೇ ದಿನಗಳಲ್ಲಿ ರಾಜಿ ಮಾಡಿಕೊಂಡಿದ್ದರು. ಆದರೂ ದಿನವೂ ಅವರಿಬ್ಬರ ನಡುವೆ ಜಗಳವಾಗುತ್ತಿತ್ತು. ಈ ತಿಂಗಳ ಮೊದಲ ವಾರದಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಗಂಡನ ಮೇಲಿನ ಕೋಪದಿಂದ ಆಕೆ ಆತನ ಮರ್ಮಾಂಗವನ್ನು ಕತ್ತರಿಸಿದ್ದಾಳೆ.
 
ಆಕೆಯ ಗಂಡನಿಗೆ ಆಪರೇಷನ್​ ಮಾಡಲಾಗಿದ್ದು, ಇದೇ ಕಾರಣಕ್ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರಿಂದ ಆತ ತಡವಾಗಿ ಪೊಲೀಸರಿಗೆ ದೂರು ನೀಡಿದ್ದ. ಹರಿತವಾದ ವಸ್ತುವಿನಿಂದ ಆತನ ಗುಪ್ತಾಂಗವನ್ನು ಕತ್ತರಿಸಲಾಗಿದ್ದು, ವೈದ್ಯರು ಹೊಲಿಗೆ ಹಾಕಿದ್ದಾರೆ. ಈ ಕುರಿತು ಪೊಲೀಸರು ದೂರು ದಾಖಲಿಸಿಕೊಂಡು ಆ ವ್ಯಕ್ತಿಯ ಹೆಂಡತಿಯನ್ನು ವಿಚಾರಣೆ ನಡೆಸಲು ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ