Select Your Language

Notifications

webdunia
webdunia
webdunia
webdunia

ಗರ್ಭಿಣಿ ಪತ್ನಿಯನ್ನು ನದಿಯಲ್ಲಿ ಮುಳುಗಿಸಿ ಪತಿ! ಮುಂದೇನಾಯ್ತು?

ಗರ್ಭಿಣಿ ಪತ್ನಿಯನ್ನು ನದಿಯಲ್ಲಿ ಮುಳುಗಿಸಿ ಪತಿ! ಮುಂದೇನಾಯ್ತು?
ಮೈಸೂರು , ಬುಧವಾರ, 15 ಡಿಸೆಂಬರ್ 2021 (12:27 IST)
ಮೈಸೂರು : ಗರ್ಭಿಣಿ ಪತ್ನಿಯನ್ನು ಕಪಿಲಾ ನದಿಯಲ್ಲಿ ಮುಳುಗಿಸಿ ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನ ಬಳಿ ನಡೆದಿದೆ.

ದೇವಿ(28) ಕೊಲೆಯಾದ ಗರ್ಭಿಣಿ. ರಾಜೇಶ್ ಕೊಲೆ ಮಾಡಿದ ಆರೋಪಿ. ಮುದ್ದಳ್ಳಿಯ ರಾಜೇಶ್ ತನ್ನ ಗರ್ಭಿಣಿ ಪತ್ನಿ ದೇವಿ(28) ಕೊಲೆ ಮಾಡಿದ್ದಾನೆ. ಆರೋಪಿ ರಾಜೇಶ್, 5 ತಿಂಗಳ ಗರ್ಭಿಣಿಯಾಗಿದ್ದ ದೇವಿಯನ್ನು ನಂಜನಗೂಡಿನ ಕಪಿಲಾ ನದಿಯಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾನೆ.

ಹಾಗೂ ತನ್ನ ಮತ್ತೊಂದು ಮಗುವನ್ನೂ ಕೊಲೆ ಮಾಡಲು ಯತ್ನಿಸಿರುವ ಆರೋಪ ಕೇಳಿ ಬಂದಿದೆ. ಸದ್ಯ ಸ್ಥಳೀಯರು ಮಗುವನ್ನು ರಕ್ಷಿಸಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ನಂಜನಗೂಡು ಪೊಲೀಸರು ಆರೋಪಿ ರಾಜೇಶ್ನನ್ನು ಅರೆಸ್ಟ್ ಮಾಡಿದ್ದಾರೆ.

ಗ್ರಾಮದಲ್ಲಿ 2 ಸಮುದಾಯಗಳ ಮಧ್ಯೆ ಅಸಮಾಧಾನ ಭುಗಿಲೆದ್ದಿದೆ. ಘಟನೆಯಲ್ಲಿ ಗ್ರಾಮದ ಯೋಗೇಶ್ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸೈಕಲ್ ಚೈನ್‌ನಿಂದ ಹಲ್ಲೆ ಮಾಡಲಾಗಿದೆ ಎಂದು ಆರೋಪಗಳು ಕೇಳಿ ಬರುತ್ತಿವೆ.

ಗ್ರಾಮಕ್ಕೆ ಮೈಸೂರು ಎಸ್‌ಪಿ ಆರ್.ಚೇತನ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಹಲ್ಲೆ ಪ್ರಕರಣ ಸಂಬಂಧ 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಗ್ರಾಮದಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಲೈಂಗಿಕ ಕಾರ್ಯಕರ್ತೆಯರಿಗೂ ಪಡಿತರ, ವೋಟರ್ ಐಡಿ, ಆಧಾರ್ ನೀಡಿ: ಸುಪ್ರೀಂ