Webdunia - Bharat's app for daily news and videos

Install App

ಮನೆ ವಿಚಾರದಲ್ಲಿ ಜಗಳ ಕೊಲೆಯಲ್ಲಿ ಅಂತ್ಯ

Webdunia
ಗುರುವಾರ, 3 ಫೆಬ್ರವರಿ 2022 (15:47 IST)
ಮನೆಯನ್ನು ತನ್ನ ಹೆಸರಿಗೆ ಬರೆದು ಕೊಡಲಿಲ್ಲವೆಂಬ ಕಾರಣಕ್ಕೆ ಪತ್ನಿಯನ್ನು ಕೊಲೆ ಮಾಡಿದ್ದ ಪತಿಯನ್ನು ಬನ್ನೇರುಘಟ್ಟ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಲತ ಮಂಡ್ಯ ತಾಲೂಕು ಕೆರಗೋಡು ಹೋಬಳಿಯ ಹೊನ್ನನಾಯಕನಹಳ್ಳಿ ನಿವಾಸಿ ರಘು(38) ಬಂಧಿತ ಆರೋಪಿ.
ಆಟೋ ಚಾಲಕ ವೃತ್ತಿ ಮಾಡುವ ರಘು, ಗಾಮೆರ್ಂಟ್ಸ್ ಕೆಲಸಕ್ಕೆ ಹೋಗುತ್ತಿದ್ದ ಭಾರತಿ ಎಂಬುವರನ್ನು ಪ್ರೀತಿಸಿ 14 ವರ್ಷದ ಹಿಂದೆ ಮದುವೆಯಾಗಿದ್ದು , ದಂಪತಿಗೆ 12 ವರ್ಷದ ಹೆಣ್ಣು ಮಗುವಿದೆ. ಆನೇಕಲ್ ತಾಲೂಕು ಜಿಗಣಿ ಹೋಬಳಿ ಕರಿಯಪ್ಪನ ಹಳ್ಳಿ ಗ್ರಾಮದಲ್ಲಿ ಮನೆಯನ್ನು ಕಟ್ಟಿದ್ದು , ಈ ಮನೆಯು ಪತ್ನಿ ಭಾರತಿ ಹೆಸರಿನಲ್ಲಿದೆ.
 
ತನ್ನ ಹೆಸರಿಗೆ ಮನೆ ಬರೆದುಕೊಡುವಂತೆ ಆಗಾಗ್ಗೆ ದಂಪತಿ ನಡುವೆ ಜಗಳ ನಡೆಯುತ್ತಿತ್ತು. ಈ ನಡುವೆ ಭಾರತಿ ಗಾರೆ ಮೇಸ್ತ್ರಿ ಮಂಜುನಾಥ್ ಎಂಬಾತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಹಲವಾರು ಬಾರಿ ಆಕೆಗೆ ಬುದ್ಧಿ ಹೇಳಿದರೂ ಸಹ ಕೇಳದೆ ಆತನೊಂದಿಗೆ ಸಲುಗೆಯಿಂದ ಇದ್ದರೆಂಬ ಆರೋಪ ಸಹ ಕೇಳಿ ಬಂದಿದೆ.
 
ಇದೇ ಕೋಪದಿಂದ ಪತ್ನಿಯನ್ನು ಕೊಲೆ ಮಾಡಲು ರಘು ತೀರ್ಮಾನಿಸಿ ಜನವರಿ 22ರಂದು ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ ಆಕೆಯೊಂದಿಗೆ ಜಗಳವಾಡಿ ಕತ್ತು ಹಿಸುಕಿ ಕೆಳಕ್ಕೆ ಬೀಳಿಸಿ ಕಾಲಿನಿಂದ ಕುತ್ತಿಗೆ ತುಳಿದು ಸಾಯಿಸಿರುವುದು ತನಿಖೆಯಿಂದ ತಿಳಿದುಬಂದಿದೆ.
 
ಐಜಿಪಿ ಚಂದ್ರಶೇಖರ್, ಎಸ್‍ಪಿ ವಂಶಿಕೃಷ್ಣ ಅವರ ನೇತೃತ್ವ, ಅಡಿಷನಲ್ ಎಸ್‍ಪಿ ಲಕ್ಷ್ಮೀ ಗಣೇಶ್, ಡಿವೈಎಸ್‍ಪಿ ಮಲ್ಲೇಶ್ ಅವರ ಮಾರ್ಗದರ್ಶನದಲ್ಲಿ ಆನೇಕಲ್ ವೃತ್ತ ನಿರೀಕ್ಷಕ ಮಹಾನಂದ, ಬನ್ನೇರುಘಟ್ಟ ಪಿಎಸ್‍ಐ ಅಂಜನ್‍ಕುಮಾರ್ ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆಯನ್ನು ಕೈಗೊಂಡು ಆರೋಪಿಯನ್ನು ಬಂಸಿ ಕೃತ್ಯಕ್ಕೆ ಬಳಸಿದ್ದ ದೊಣ್ಣೆ ಮತ್ತು ವೇಲ್‍ನ್ನು ವಶಪಡಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments