Webdunia - Bharat's app for daily news and videos

Install App

ಹೆಂಡ್ತಿ ಕಿರುಕುಳಕ್ಕೆ ಪತಿ ನೇಣಿಗೆ ಶರಣು: ಡೆತ್ ನೋಟ್ ನಲ್ಲಿ ಏನಿತ್ತು ನೋಡಿ

Krishnaveni K
ಮಂಗಳವಾರ, 28 ಜನವರಿ 2025 (11:45 IST)
ಹುಬ್ಬಳ್ಳಿ: ಹೆಂಡ್ತಿ ಕಿರುಕುಳದಿಂದಾಗಿ ಪತಿ ನೇಣಿಗೆ ಶರಣಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಪತಿಯ ಡೆತ್ ನೋಟ್ ನಲ್ಲಿ ಏನಿತ್ತು ನೋಡಿ. ಇದು ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಅತುಲ್ ಸುಭಾಷ್ ಕೇಸ್ ನ್ನೇ ಹೋಲುತ್ತಿದೆ.

ಪೀಟರ್ ಎಂಬ ವ್ಯಕ್ತಿ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಮನೆಯವರೆಲ್ಲರೂ ಚರ್ಚ್ ಗೆ ಹೋಗಿದ್ದಾಗ ಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯವರು ಬಂದು ನೋಡಿದಾಗ ಪೀಟರ್ ಮೃತದೇಹ ಪತ್ತೆಯಾಗಿತ್ತು.

ಪಕ್ಕದಲ್ಲೇ ಡೆತ್ ನೋಟ್ ಕೂಡಾ ಸಿಕ್ಕಿದೆ. ಅಪ್ಪ-ಅಮ್ಮ ನನ್ನನ್ನು ಕ್ಷಮಿಸಿ. ಪಿಂಕಿ (ಪತ್ನಿ) ನಂಗೆ ಟಾರ್ಚರ್ ಮಾಡ್ತಿದ್ದಾಳೆ. ನನ್ನ ಶವ ಪೆಟ್ಟಿಗೆ ಮೇಲೆ ಹೆಂಡತಿಯ ಟಾರ್ಚರ್ ನಿಂದಾಗಿಯೇ ಸಾಯುತ್ತಿದ್ದೇನೆ ಎಂದು ಬರೆಸಿ’ ಎಂದು ಬರೆದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅವರ ಸಹೋದರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಕಳೆದ 11 ತಿಂಗಳಿನಿಂದ ಪತಿ-ಪತ್ನಿ ದೂರವಾಗಿದ್ದಾರೆ. ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು 20 ಲಕ್ಷ ರೂ. ಗೆ ಬೇಡಿಕೆಯಿಟ್ಟಿದ್ದಾಳೆ. ಆದರೆ ನನಗೆ ಅಷ್ಟು ಕೊಡುವ ಶಕ್ತಿಯಿಲ್ಲ ಎಂದಿದ್ದಕ್ಕೆ ನೀನು ಸತ್ತರೆ ಸಾಯಿ ಎಂದು ಪತ್ನಿ ಹೇಳಿದ್ದಳು ಎನ್ನಲಾಗಿದೆ. ಹೀಗಾಗಿ ಪತ್ನಿಯ ಕಿರುಕುಳ ತಾಳಲಾರದೇ ಪೀಟರ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments