Webdunia - Bharat's app for daily news and videos

Install App

ಕಾಡಾನೆಯೊಂದಿಗೆ ಹುಚ್ಚಾಟ ನಡೆಸಿದ ತಪ್ಪಿಗೆ ಭಾರೀ ದಂಡ ಕಟ್ಟಿದ ಆರೋಪಿ ಮಾಡಿದ್ದೇನು

Sampriya
ಸೋಮವಾರ, 10 ಫೆಬ್ರವರಿ 2025 (14:48 IST)
Photo Courtesy X
ಚಾಮರಾಜನಗರ: ರಸ್ತೆಗೆ ಬಂದಿದ್ದ ಕಾಡಾನೆ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಚೆಲ್ಲಾಟ ಆಡಿದ್ದ ಆರೋಪಿಗೆ ಅರಣ್ಯ ಇಲಾಖೆ ₹ 25 ಸಾವಿರ ರೂಪಾಯಿ ದಂಡ ವಿಧಿಸಿದೆ. ಜೊತೆಗೆ ವನ್ಯಜೀವಿಗಳಿಗೆ ತೊಂದರೆ ಕೊಡದಂತೆ ಮುಚ್ಚಳಿಕೆ ಬರೆಸಿಕೊಂಡು ಎಚ್ಚರಿಕೆ ನೀಡಿದೆ.

ಗುಂಡ್ಲುಪೇಟೆಯ ಶಾಹುಲ್ ಹಮೀದ್ ಎಂಬವರು ₹ 25 ಸಾವಿರ ದಂಡ ಕಟ್ಟಿದ್ದಾರೆ. ಆಹಾರ ಅರಸಿ ರಸ್ತೆಗಿಳಿದ ಕಾಡಾನೆ ಮುಂದೆ ಫೋಟೋಗಾಗಿ ಹುಚ್ಚಾಟ ಮೆರೆದಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

ಗುಂಡ್ಲುಪೇಟೆ- ಊಟಿ ಹೆದ್ದಾರಿ ಹಾದುಹೋಗುವ ಬಂಡೀಪುರದಲ್ಲಿ ಕಾಡಾನೆ ಮುಂದೆ ಕಿರುಚಾಡಿರುವುದು ವಿಡಿಯೊದಲ್ಲಿ ಸೆರೆಯಾಗಿತ್ತು. ರಸ್ತೆಗೆ ಬಂದ ಕಾಡಾನೆ ಕಂಡು ಫೋಟೋ ತೆಗೆಸಿಕೊಂಡು ಕಿರುಚಾಡಿ ಕೀಟಲೆ ಮಾಡಿದ್ದರು‌. ಕಾಡಾನೆ ಎದುರು ಹುಚ್ಚಾಟ ಮೆರೆದ ಯುವಕನನ್ನು ಬಂಧಿಸಬೇಕೆಂದು ಒತ್ತಾಯವೂ ಕೇಳಿಬಂದಿತ್ತು. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದ್ದಂತೆ ಎಚ್ಚೆತ್ತ ಬಂಡೀಪುರ ಅರಣ್ಯ ಇಲಾಖೆಯು 25 ಸಾವಿರ ರೂ. ದಂಡ ವಿಧಿಸಿ ಬಿಸಿ ಮುಟ್ಟಿಸಿದೆ.

ದಂಡ ಪಾವತಿಸಿದ ಶಾಹುಲ್ ಹಮೀದ್ ವಿಡಿಯೋದಲ್ಲಿ ಮಾತನಾಡಿದ್ದು, ಬಂಡೀಪುರ ರಾಷ್ಟ್ರೀಯ ಉದ್ಯಾನವನದ ವಾಪ್ತಿಯಲ್ಲಿ ಊಟಿಗೆ ಹೋಗುವಾಗ ಆನೆ ನಾನು ಮುಂದೆ ಫೋಟೊ ಹಾಗೂ ವಿಡಿಯೋಗಳನ್ನು ಕ್ಲಿಕ್ಕಿಸಿದ್ದು, ಇದಕ್ಕಾಗಿ ₹ 25 ಸಾವಿರ ದಂಡ ಕಟ್ಟಿದ್ದೇನೆ. ಈ ರಾಷ್ಟ್ರೀಯ ಉದ್ಯಾನವನ ಪರಿಸರದಲ್ಲಿ ಪ್ಲಾಸ್ಟಿಕ್ ಎಸೆಯುವುದು, ವಾಹನ ನಿಲ್ಲಿಸುವುದು​ ಹಾಗೂ ವಿಡಿಯೋ, ಫೋಟೊ ಸೆರೆಹಿಡಿಯುವುದು ತಪ್ಪಾಗಿದೆ. ಹೀಗಾಗಿ, ಅಂತಹ ತಪ್ಪುಗಳನ್ನು ಯಾರೂ ಮಾಡಬಾರದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments