Publish Date: Sun, 14 May 2023 (12:57 IST)
Updated Date: Sun, 14 May 2023 (12:47 IST)
ಬೆಂಗಳೂರು : ನಾನು ಕೆಲಸಗಾರ, ಈಗ ನಿರುದ್ಯೋಗಿ ಆಗಿದ್ದೇನೆ. ಒಳ್ಳೆಯವರನ್ನು ಯಾರೂ ಗುರುತಿಸಲ್ಲ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ವಿ. ಸೋಮಣ್ಣ ಬೇಸರ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಸೂಚನೆ ಮೇರೆಗೆ ಹೋಗಿ ಸ್ಪರ್ಧಿಸಿದೆ. ಚಾಲೆಂಜ್ ಆಗಿ ತಗೊಂಡೆ. ಪ್ರತಿಯೊಂದಕ್ಕೂ ಕಾಲ ಅಂತ ಇರುತ್ತದೆ. ನನ್ನ ಈ ಕ್ಷೇತ್ರ ಚಿನ್ನದಂತೆ ಇತ್ತು. ಹೈಕಮಾಂಡ್ ಹೇಳ್ತು ಅಂತ ಹೋದೆ. ಜನ ತೀರ್ಮಾನ ಮಾಡಿದ್ದಾರೆ.
ಕ್ಷೇತ್ರಕ್ಕಿಂತ ಪಕ್ಷ ದೊಡ್ಡದು, ಪಕ್ಷದ ಮಾತು ಕೇಳಿದೆ ಅಷ್ಟೇ ಪಕ್ಷಕ್ಕೂ ಹಿನ್ನಡೆ ಆಗಿದ್ದು, ನಮಗೆಲ್ಲ ಒಂದು ಎಚ್ಚರಿಕೆ ಗಂಟೆಯಾಗಿದೆ. ಇನ್ನೇನು ಸೋತಾಗಿದೆ, ಏನ್ ಮಾತಾಡ್ಲಿ, ಸೋತಾಯಿತಲ್ಲ. ಮಾತಾಡೋದು ಅಗತ್ಯ ಇಲ್ಲ ಸೋತಿದ್ದೀನಿ ಅಷ್ಟೇ. ಜನರ ತೀರ್ಮಾನ ಇದು, ಬದ್ಧರಾಗಬೇಕು ಎಂದು ಹೇಳಿದರು.