Webdunia - Bharat's app for daily news and videos

Install App

ಸಿಎಂ ಆಗುವ ಯೋಗ್ಯತೆ ನನಗಿದೆ: ಉಮೇಶ್ ಕತ್ತಿ

Webdunia
ಸೋಮವಾರ, 12 ಜುಲೈ 2021 (14:52 IST)
ನಾನು 8 ಬಾರಿ ಶಾಸಕ ಆದವನು, ಸಚಿವನಾಗಿ 6 ಇಲಾಖೆ ನಿರ್ವಹಿಸಿದ ಅನುಭವಿದೆ. ರಾಜಕೀಯವಾಗಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಆದ್ದರಿಂದ ಮುಖ್ಯಮಂತ್ರಿ ಆಗುವ ಯೋಗ್ಯತೆ ನನಗೆ ಇದೆ ಎಂದು ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
ಧಾರವಾಡದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳಂಕ ರಹಿತನಾಗಿ ಶಾಸಕ, ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಪಕ್ಷ ತೀರ್ಮಾನಿಸಿ
ದರೆ ಸಿಎಂ ಆಗುವ ಆಸೆ ಇದೆ. ಸಿಎಂ ಆದ ಮೇಲೆ ಪ್ರಧಾನಿಯಾಗುವ ಅಸೆಯೂ ಇರುತ್ತದೆ ಎಂದರು.
ಸದ್ಯಕ್ಕೆ ನಾವು ಅಖಂಡ ಕರ್ನಾಟಕದಲ್ಲಿ ಬದುಕಿದ್ದೇನೆ. ಕರ್ನಾಟಕ ಸಿಎಂ ಆಗುತ್ತೇನೆ. ಏನಾದರೂ ಉತ್ತರ ಕರ್ನಾಟಕ ತೊಂದರೆ ಆದಲ್ಲಿ ಪ್ರತ್ಯೇಕ ರಾಜ್ಯದ ಕೂಗು ಎಬ್ಬಿಸುವೆ. ದಿನ ಬೆಳಗ್ಗೆ ಎದ್ದ ತಕ್ಷಣ ಉತ್ತರ ಕರ್ನಾಟಕ ಒಡೆಯಲು ಆಗುವುದಿಲ್ಲ. ತೊಂದರೆ ಆದಾಗ ಕೂಗು ಎಬ್ಬಿಸಬೇಕಾಗುತ್ತದೆ. ಉತ್ತರ ಕರ್ನಾಟಕ ಒಡೆಯುವ ಉದ್ದೇಶ ನನಗಿಲ್ಲ. ಆಖಂಡ ಕರ್ನಾಟಕದಲ್ಲಿ ಬದುಕಬೇಕು, ಅದನ್ನು ಆಳಬೇಕು ಎನ್ನುವ ಉದ್ದೇಶ ಇದೆ ಎಂದು ಅವರು ವಿವರಿಸಿದರು.
ಈ ಸಲ ಉತ್ತರ ಕರ್ನಾಟಕದವರಿಗೆ ಸಿಎಂ ಸ್ಥಾನ ಸಿಗಬಹುದು. ನನಗೆ ಇನ್ನೂ 15 ವರ್ಷ ಅವಕಾಶ ಇದೆ. ಈಗ ನಂಗೆ 60 ವರ್ಷ, ಹದಿನೈದು ವರ್ಷದಲ್ಲಿ ಸಿಎಂ ಆಗಬಹುದು. 8 ಸಲ ಶಾಸಕ ಆಗಿದ್ದೇನೆ. 11 ಬಾರಿಯಾದರೂ ಸರಿ ಎಂಎಲ್‌ಎ ಆಗುವೆ ಎಂದು ಉಮೇಶ್ ಕತ್ತಿ ಪ್ರಶ್ನಿಸಿದರು.
ಅರವಿಂದ ಬೆಲ್ಲದ ಯಾಕೆ ಸಿಎಂ ಆಗಬಾರದು? ಅವರ ತಂದೆ ಶಾಸಕರಾಗಿದ್ದರು. ಬೆಲ್ಲದ ಎರಡು ಸಲ ಶಾಸಕರಾಗಿದ್ದಾರೆ. ಯತ್ನಾಳ, ನಾನು, ಮುರಗೇಶ ನಿರಾಣೆ, ಬೆಲ್ಲದ ಸಹ ಸಿಎಂ ಆಗಬಹುದು. ಉತ್ತರ ‌ಕರ್ನಾಟಕದವರು ಯಾರಾದರೂ ಸಿಎಂ ಆಗಬಹುದು ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments