ಸಿಎಂ ಆಗುವ ಯೋಗ್ಯತೆ ನನಗಿದೆ: ಉಮೇಶ್ ಕತ್ತಿ

Webdunia
ಸೋಮವಾರ, 12 ಜುಲೈ 2021 (14:52 IST)
ನಾನು 8 ಬಾರಿ ಶಾಸಕ ಆದವನು, ಸಚಿವನಾಗಿ 6 ಇಲಾಖೆ ನಿರ್ವಹಿಸಿದ ಅನುಭವಿದೆ. ರಾಜಕೀಯವಾಗಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಆದ್ದರಿಂದ ಮುಖ್ಯಮಂತ್ರಿ ಆಗುವ ಯೋಗ್ಯತೆ ನನಗೆ ಇದೆ ಎಂದು ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
ಧಾರವಾಡದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳಂಕ ರಹಿತನಾಗಿ ಶಾಸಕ, ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಪಕ್ಷ ತೀರ್ಮಾನಿಸಿ
ದರೆ ಸಿಎಂ ಆಗುವ ಆಸೆ ಇದೆ. ಸಿಎಂ ಆದ ಮೇಲೆ ಪ್ರಧಾನಿಯಾಗುವ ಅಸೆಯೂ ಇರುತ್ತದೆ ಎಂದರು.
ಸದ್ಯಕ್ಕೆ ನಾವು ಅಖಂಡ ಕರ್ನಾಟಕದಲ್ಲಿ ಬದುಕಿದ್ದೇನೆ. ಕರ್ನಾಟಕ ಸಿಎಂ ಆಗುತ್ತೇನೆ. ಏನಾದರೂ ಉತ್ತರ ಕರ್ನಾಟಕ ತೊಂದರೆ ಆದಲ್ಲಿ ಪ್ರತ್ಯೇಕ ರಾಜ್ಯದ ಕೂಗು ಎಬ್ಬಿಸುವೆ. ದಿನ ಬೆಳಗ್ಗೆ ಎದ್ದ ತಕ್ಷಣ ಉತ್ತರ ಕರ್ನಾಟಕ ಒಡೆಯಲು ಆಗುವುದಿಲ್ಲ. ತೊಂದರೆ ಆದಾಗ ಕೂಗು ಎಬ್ಬಿಸಬೇಕಾಗುತ್ತದೆ. ಉತ್ತರ ಕರ್ನಾಟಕ ಒಡೆಯುವ ಉದ್ದೇಶ ನನಗಿಲ್ಲ. ಆಖಂಡ ಕರ್ನಾಟಕದಲ್ಲಿ ಬದುಕಬೇಕು, ಅದನ್ನು ಆಳಬೇಕು ಎನ್ನುವ ಉದ್ದೇಶ ಇದೆ ಎಂದು ಅವರು ವಿವರಿಸಿದರು.
ಈ ಸಲ ಉತ್ತರ ಕರ್ನಾಟಕದವರಿಗೆ ಸಿಎಂ ಸ್ಥಾನ ಸಿಗಬಹುದು. ನನಗೆ ಇನ್ನೂ 15 ವರ್ಷ ಅವಕಾಶ ಇದೆ. ಈಗ ನಂಗೆ 60 ವರ್ಷ, ಹದಿನೈದು ವರ್ಷದಲ್ಲಿ ಸಿಎಂ ಆಗಬಹುದು. 8 ಸಲ ಶಾಸಕ ಆಗಿದ್ದೇನೆ. 11 ಬಾರಿಯಾದರೂ ಸರಿ ಎಂಎಲ್‌ಎ ಆಗುವೆ ಎಂದು ಉಮೇಶ್ ಕತ್ತಿ ಪ್ರಶ್ನಿಸಿದರು.
ಅರವಿಂದ ಬೆಲ್ಲದ ಯಾಕೆ ಸಿಎಂ ಆಗಬಾರದು? ಅವರ ತಂದೆ ಶಾಸಕರಾಗಿದ್ದರು. ಬೆಲ್ಲದ ಎರಡು ಸಲ ಶಾಸಕರಾಗಿದ್ದಾರೆ. ಯತ್ನಾಳ, ನಾನು, ಮುರಗೇಶ ನಿರಾಣೆ, ಬೆಲ್ಲದ ಸಹ ಸಿಎಂ ಆಗಬಹುದು. ಉತ್ತರ ‌ಕರ್ನಾಟಕದವರು ಯಾರಾದರೂ ಸಿಎಂ ಆಗಬಹುದು ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಫುಟ್ಪಾತ್ ತೆರವುಗೊಳಿಸುತ್ತಿದ್ದ ಜಿಬಿಎ ಅಧಿಕಾರಿಗಳಿಂದ ಶಿವಾಜಿನಗರದಲ್ಲಿ ಕೈಗೆ ಸಿಕ್ಕ ವಸ್ತುಗಳಿಂದ ದಾಳಿ Video

ಜು 26ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಆರ್‌ಎಸ್‌ಎಸ್‌ ಬಗ್ಗೆ ಅವಹೇಳನಕಾರಿ ಪೋಸ್ಟ್‌: ಪ್ರಿಯಾಂಕ್‌ ಖರ್ಗೆ, ನಲಪಾಡ್‌ಗೆ ಕೋರ್ಟ್‌ ಮಹತ್ವದ ಸೂಚನೆ

ಮುಂದಿನ ಸುದ್ದಿ
Show comments