Publish Date: Tue, 24 Jan 2023 (18:51 IST)
Updated Date: Tue, 24 Jan 2023 (19:00 IST)
ಸ್ಯಾಂಟ್ರೋ ರವಿ ಹಗರಣದಲ್ಲಿ ತಮ್ಮ ಮೇಲೆ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ನಾನು ಸ್ವಚ್ಛವಾಗಿದ್ದೇನೆ.ಯಾರ್ಯಾರೋ ಬಂದು ನಮ್ಮ ಜೊತೆ ಫೋಟೋ ತೆಗೆಸಿಕೊಳ್ಳುತ್ತಿರುತ್ತಾರೆ. ಅದನ್ನು ಇಟ್ಟುಕೊಂಡು ಆರೋಪ ಮಾಡಿದ್ರೆ ಹೇಗೆ? ಎಂದು ತಿರುಗೇಟು ನೀಡಿದ್ದಾರೆ. ವಿಕಾಸಸೌಧದಲ್ಲಿ ಇಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿ ತಂಡಕ್ಕೆ ತನಿಖೆಗೆ ಆದೇಶ ಮಾಡಲಾಗಿದೆ. ಸ್ವತಂತ್ರವಾಗಿ ತನಿಖೆ ಮಾಡಲು ಅವಕಾಶ ಕೊಟ್ಟಿದ್ದೇವೆ. ಯಾವ ಅಧಿಕಾರಿಗೆ ಬೆದರಿಕೆ ಹಾಕಿದ್ದಾರೆ. ಏನು ಮಾಹಿತಿ ಇದೆ ಎಂಬುದನ್ನು ತಿಳಿದು ತನಿಖೆ ಮಾಡುತ್ತಾರೆ. ಪೊಲೀಸ್ ಹಗರಣದ ತನಿಖೆಯನ್ನು ಸಿಐಡಿಗೆ ಕೊಟ್ಟಿದ್ದೇವೆ. ಅದು ತನಿಖೆ ನಡೆದು ಕೆಲವರ ಬಂಧನ ಆಗಿದೆ. ಯಾರು ಹೊರಗಡೆ ಮಾತನಾಡುತ್ತಾರೋ ಅವರು ಸಾಕ್ಷಿ ಕೊಡಲಿ ಎಂದು ಸವಾಲು ಹಾಕಿದರು.