Webdunia - Bharat's app for daily news and videos

Install App

ಒಂದು ಹೆಣ್ಣಿಂದ ಡಿಕೆಶಿಗೆ ಶೇಪ್‌ ಔಟ್‌ ಆಗಿದ್ದಕ್ಕೆ ಖುಷಿ ಆಗಿದೆ: ಅಶ್ವಥ್‌ ನಾರಾಯಣ್‌

Webdunia
ಶುಕ್ರವಾರ, 13 ಮೇ 2022 (14:59 IST)
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ವಿರುದ್ಧ ರಮ್ಯಾ ಕಿಡಿಕಾರಿದ್ದರಿಂದ ನನಗೆ ಖುಷಿ ಆಗಿದೆ. ಅವರಿಗೆ ಒಬ್ಬ ಹೆಣ್ಣು ಮಗಳಿಂದ ಶೇಪ್‌ ಔಟಾಗಿದೆ ಎಂದು ಸಚಿವ ಅಶ್ವಥ್‌ ನಾರಾಯಣ್‌ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್‌ ಭಾರೀ ಬಿಲ್ಡಪ್‌ ಕೊಡುತ್ತಿದ್ದರು. ನಾನು ಯಾರಿಗೆ ಬೇಕಾದರೂ ತಾಗ್ತೀನಿ ಅಂತ ಬಿಲ್ಡಪ್ ಕೊಡುತ್ತಿದ್ದರು. ಆದರೆ ಈಗ  ಡಿಕೆ ಶಿವಕುಮಾರ್ ಗೆ ರಮ್ಯಾ ಹೇಳಿಕೆಯಿಂದ ಮುಖಭಂಗವಾದಂತಾಗಿದೆ ಎಂದರು.
ಅಶ್ವಥ್‌ ನಾರಾಯಣನ ಮುಗಿಸಿಬಿಡ್ತೀನಿ ಅಂತ ಹೋರಟಿದ್ದರು. ಆದರೆ ಈಗ ಅವರೇ ಐಸೋಲೇಟ್‌ ಆಗಿದ್ದಾರೆ. ರಮ್ಯಾ ಟೀಕೆ ಮಾಡಿದಳು ಅಂತ ಅವರ ಬಗ್ಗೆ ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದರು.
ಎಂಥ ವ್ಯಕ್ತಿ ಅಧ್ಯಕ್ಷರಾಗಿದ್ದಾರಪ್ಪ ಎಂಬ ಮುಜುಗರ ಕಾಂಗ್ರೆಸ್ ನಾಯಕರಿಗೆ ಆಗಿದೆ. ಅನುಕಂಪ ಒಳ್ಳೆಯವರ ಮೇಲೆ ಇರತ್ತೆ. ಸಜ್ಜನರ ಮೇಲೆ ಇರತ್ತೆ. ಡಿಕೆಶಿವಕುಮಾರ್ ಅಂಥವರ ಮೇಲಲ್ಲ. ಅವರದ್ದೇ ಪಕ್ಷದ ಹೆಣ್ಣು ಮಗಳ ಮೇಲೇಯೇ ತೇಜೋವಧೆ ಮಾಡಿದರೆ ಏನಾಗುತ್ತೆ ಎಂದು ಈ ಘಟನೆಯಿಂದ ಡಿಕೆ ಶಿವಕುಮಾರ್‌ ಅವರಿಗೆ ಅರಿವಾಗಿರಬೇಕು ಎಂದು ಅಶ್ವಥ್‌ ನಾರಾಯಣ್‌ ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments