Publish Date: Wed, 24 Oct 2018 (22:07 IST)
Updated Date: Wed, 24 Oct 2018 (22:11 IST)
ನಾನು ಆರೋಗ್ಯವಾಗಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಒಂದೆರಡು ದಿನಗಳಲ್ಲಿ ಉಪಚುನಾವಣೆಯ ಪ್ರಚಾರ ಮಾಡುವೆ. ಹೀಗಂತ ಜೆಡಿಎಸ್ ರಾಜ್ಯಾಧ್ಯಕ್ಷ ಹೇಳಿದ್ದಾರೆ.
ನಾನು ಚೆನ್ನಾಗಿದ್ದೇನೆ. ಯಾರು ಆತಂಕ ಪಡುವ ಅಗತ್ಯವಿಲ್ಲ.ಇನ್ನು ಒಂದೆರಡು ಮೂರುದಿನದಲ್ಲಿ ಬೈ ಎಲೆಕ್ಷನ್ ಪ್ರಚಾರ ಮಾಡ್ತಿನಿ ಎಂದು ಮೈಸೂರಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.
‘ಮಾಜಿ ಪ್ರಧಾನಿ ದೇವೇಗೌಡ್ರಿಗೆ ವಾಲ್ಮೀಕಿ ಪ್ರಶಸ್ತಿ ನೀಡಲಾಗಿದೆ. ನಾನು ದೂರವಾಣಿ ಮೂಲಕ ಅವ್ರಿಗೆ ಶುಭಾಶಯ ಕೋರಿದ್ದೇನೆ. ಒಬ್ಬ ಅರ್ಹ ವ್ಯಕ್ತಿಗೆ ಪ್ರಶಸ್ತಿ ನೀಡಲಾಗಿದೆ. ನನಗೂ ಸಂತಸವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ ಹೇಳಿದ್ಧಾರೆ.