Webdunia - Bharat's app for daily news and videos

Install App

ಬಿಎಸ್ವೈಗೆ ಪರೋಕ್ಷ ಎಚ್ಚರಿಕೆ : ನಾನು ಸಚಿವ ಸ್ಥಾನ ಆಕಾಂಕ್ಷಿಯಲ್ಲ ಎಂದ ಶಾಸಕ

Webdunia
ಶುಕ್ರವಾರ, 16 ಆಗಸ್ಟ್ 2019 (18:59 IST)
ರಾಜ್ಯ ಸಚಿವ ಸಂಪುಟ ರಚನೆಗೆ ಬಿ.ಎಸ್.ಯಡಿಯೂರಪ್ಪ ಕಸರತ್ತು ನಡೆಸುತ್ತಿದ್ದರೆ, ಆಕಾಂಕ್ಷಿಗಳು ತಮ್ಮದೇ ರೀತಿಯಲ್ಲಿ ರಾಜಕೀಯ ದಾಳ ಉರುಳಿಸೋಕೆ ಮುಂದಾಗ್ತಿದ್ದಾರೆ.

ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ, ಯಾರಲ್ಲೂ ಸಚಿವ  ಸ್ಥಾನ ಕೊಡಿ ಅಂತ ಕೇಳಿಲ್ಲ. ಜಗಳೂರಿಗೆ ನೀರಾವರಿ ಸೌಲಭ್ಯಕ್ಕೆ ಮನವಿ ಮಾಡಿದ್ದೇನೆ. ಸಚಿವ ಸ್ಥಾನವೂ ಕೊಡದೇ ನನ್ನ ಬೇಡಿಕೆ ಈಡೇರಿಸದಿದ್ದರೆ ಮುಂದೆ ಆಲೋಚಿಸುತ್ತೇನೆ ಹೀಗಂತ ಕಮಲ ಪಡೆ ಶಾಸಕ ಪರೋಕ್ಷ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಮುಂದೆ ಏನು ಮಾಡಬೇಕೆಂಬ ಬಗ್ಗೆ ಆಲೋಚನೆ ಇದೆ ಅಂತ ದಾವಣಗೆರೆಯಲ್ಲಿ ಜಗಳೂರು ಬಿಜೆಪಿ ಶಾಸಕ ಎಸ್. ವಿ. ರಾಮಚಂದ್ರ ಹೇಳಿಕೆ ನೀಡಿದ್ದಾರೆ.

ಈ ಮೂಲಕ ಕುತೂಹಲ ಕೆರಳಿಸಿದೆ ಸಿಎಂ ಬಿ.ಎಸ್.ಯಡಿಯೂರಪ್ಪ ಆಪ್ತ ಶಾಸಕರ ಮಾತು.  

ಇನ್ನೂ ಮೂರುವರೆ ವರ್ಷ ಕಾಲಾವಕಾಶ ಇದೆ, ಈಗಲೇ ದುಡುಕಲ್ಲ. ಸಚಿವ ಸ್ಥಾನಕ್ಕೆ ನಾನು ಬೇಡಿಕೆ ಇಟ್ಟಿಲ್ಲ, ನಾನೇನೂ ಸನ್ಯಾಸಿ ಅಲ್ಲ ಅಂತಾನೂ ಹೇಳಿದ್ದಾರೆ. ಸಚಿವ ಸ್ಥಾನವನ್ನ ಹೈಕಮಾಂಡ್ ಕೊಟ್ಟರೆ ನಿಭಾಯಿಸುವೆ ಅಂತ ಹೇಳಿದ್ದಾರೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments