ಅಕ್ರಮ ಗಣಿಗಾರಿಕೆ ನಡೆಯೋಕೆ ಬಿಡಲ್ಲ: ಸುಮಲತಾ

Webdunia
ಸೋಮವಾರ, 12 ಜುಲೈ 2021 (18:38 IST)
ಅಕ್ರಮ ಗಣಿಗಾರಿಕೆ ವಿರುದ್ಧದ ನನ್ನ ಹೋರಾಟ ಏಕಾಂಗಿ ಅನಿಸಬಹುದು. ಆದರೆ ಮುಂದಿನ ದಿನಗಳಲ್ಲಿ ನನ್ನ ಜೊತೆ ಯಾರೆಲ್ಲ ಇದ್ದಾರೆ ಎಂಬುದು ತಿಳಿಯಲಿದೆ ಎಂದು ಮಂಡ್ಯ ಸಂಸದೆ ಸುಮಲತಾ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಗಣಿಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರನ್ನು ಸೋಮವಾರ ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಕೆಆರ್ ಎಸ್ ಡ್ಯಾಂ ಬಳಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಮೇಲೆ ಈಗಾಗಲೇ ಸುಮಾರು 100 ಕೋಟಿ ರೂ. ದಂಡ ವಿಧಿಸಲಾಗಿದೆ. ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ನಡೆಯಲೇಬಾರದು. ಇದರಿಂದ ಸಾವಿರಾರು ಕೋಟಿ ರೂ.ರಾಜಧನ ನಷ್ಟವಾಗುತ್ತಿದೆ. ಕಠಿಣ ಕ್ರಮ ಕೈಗೊಂಡು ರಾಜಧನ ವಸೂಲು ಮಾಡಬೇಕಿದೆ ಎಂದರು.
ಅಕ್ರಮ ಗಣಿಗಾರಿಕೆಯಿಂದ ವಸೂಲು ಮಾಡಲಾದ ಹಣವನ್ನು
ಮಂಡ್ಯ ಅಭಿವೃದ್ಧಿ ಕೆಲಸಕ್ಕೆ ಬಳಸಬೇಕು ಅಂತ ವಿನಂತಿಸಿದ್ದೇನೆ. ಮುಂದಿನ ದಿನಗಳಲ್ಲಿ ಯಾವ ರೀತಿ ಕ್ರಮ ತಗೋಬೇಕು, ಹೇಗೆ ಸರಿಪಡಿಸಬೇಕು ಅನ್ನೋದನ್ನ ಮಾತಾಡಿದ್ದೇವೆ. ನಾಳೆ ಬೇಬಿ ಬೆಟ್ಟಕ್ಕೆ ಹೋಗಿ ಪರಿಶೀಲನೆ ಮಾಡುತ್ತೇನೆ ಎಂದು ಅವರು ಹೇಳಿದರು.
ಇಲ್ಲಿ ಜನ ಅಥವಾ ರೈತರಿಗಿಂತ ಯಾರು ದೊಡ್ಡೋರಿಲ್ಲ. ನಾನ್ಯಾವುದನ್ನ ನಾನ್ ಕ್ಲಿಯರ್ ಮಾಡಲ್ಲ. ಅಲ್ಲಿ ಏನು ಮಾಡ್ತಿದ್ದೀರಾ ಅನ್ನೋದನ್ನ ನೀವೇ ನೋಡ್ತೀರಾ? ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆಯೋ ಇಲ್ಲವೋ ಅನ್ನೋದನ್ನು ಮಾಧ್ಯಮಗಳೇ ಸ್ಟಿಂಗ್ ಆಪರೇಷನ್ ಮಾಡಿ ಬೆಳಕಿಗೆ ತರಲಿ ಎಂದು ಮನವಿ ಮಾಡಿದರು.
ಯಾರ್ಯಾರೋ ಸವಾಲಿನ ಮಾತುಗಳಿಗೆ ಉತ್ತರಿಸೋಕೆ ಹೊಗಲ್ಲ. ಕಾಂಟ್ರವಸ್ರಿ ಮಾತಾಡೋರಿಗೆ ನಾನು ತಲೆಕೆಡಿಸಿಕೊಂಡಿಲ್ಲ. ಯಾರು ಪೊಲಿಟಿಕಲಿ ಮಾಡ್ತಿದ್ದಾರೋ ಅವರಿಗೆ ಪ್ರಶ್ನೆ ಹಾಕಿ. ನನ್ನ ಹೋರಾಟ ಒಬ್ಬಂಟಿ ಹೋರಾಟ ಅನಿಸಬಹುದು. ಬರುವ ದಿನಗಳಲ್ಲಿ ಯಾರೆಲ್ಲ ನನ್ನ ಜೊತೆ ಇದ್ದಾರೆ ಅಂತಾ ಗೊತ್ತಾಗುತ್ತೆ. ವಾಸ್ತವ ಏನು ಎಂಬುದು ಶೀಘ್ರ ಬೆಳಕಿಗೆ ಬರಲಿದೆ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ: ಸರ್ಕಾರದ ವಿರುದ್ಧ ಸಿಡಿದೆದ್ದ ಹಿಂದೂಗಳು

Karnataka Weather: ಈ ಜಿಲ್ಲೆಗಳ ಹವಾಮಾನ ಬದಲಾವಣೆ ಇಂದು ತಪ್ಪದೇ ಗಮನಿಸಿ

ನಾಳೆ ಗೊತ್ತಾಗಲಿದೆ ಕೇರಳ ಸಿಎಂ ಪಟ್ಟ ಯಾರಿಗೆಂದು

NEET-UG 2026 ಪೇಪರ್ ಲೀಕ್ ಪ್ರಕರಣ: 5 ಮಂದಿ ಅರೆಸ್ಟ್‌, ಅನೇಕ ಸ್ಥಳಗಳ ಮೇಲೆ ದಾಳಿ

ಇಂಧನ ವೆಚ್ಚದಲ್ಲಿ ಹೆಚ್ಚಳ: ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನ ಹಾರಾಟ ಸ್ಥಗಿತ

ಮುಂದಿನ ಸುದ್ದಿ
Show comments