ರಾಜೀನಾಮೆ ವಿಷಯ ಊಹಾಪೋಹ: ಆನಂದ್ ಸಿಂಗ್ ಸ್ಪಷ್ಟನೆ

Webdunia
ಶುಕ್ರವಾರ, 13 ಆಗಸ್ಟ್ 2021 (17:28 IST)
ನಾನು ರಾಜೀನಾಮೆ ನೀಡುತ್ತೇನೆ ಎಂಬುದು ಊಹಾಪೋಹ. ನಾನು ಸಿಎಂ ಬೊಮ್ಮಾಯಿ ಅವರ ಜೊತೆ ಖಾತೆ ಹಂಚಿಕೆ ಕುರಿತು ಮಾತನಾಡಿದ್ದು, ಅವರ ನಿರ್ಧಾರವನ್ನು
ಕಾದು ನೋಡುತ್ತೇನೆ ಎಂದು ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.
ಬೆಂಗಳೂರಿನಿಂದ ವಿಜಯನಗರದ ವೇಣುಗೋಪಲ ದೇವಸ್ಥಾನಕ್ಕೆ ಶುಕ್ರವಾರ ಆಗಮಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್ 15ರ ಸ್ವಾತಂತ್ರೋತ್ಸವದಲ್ಲಿ ದ್ವಜಾರೋಹಣ ನೆರವೇರಿಸುವೆ. ವಿಜಯನಗರ ಜಿಲ್ಲೆಯಲ್ಲಿ ಪ್ರಥಮ ಭಾರಿಗೆ ಧ್ವಜಾರೋಹಣ ಮಾಡುವ ಅವಕಾಶ ನನಗೆ ಸಿಕ್ಕಿದೆ. ಹೀಗಾಗಿ ಅದು ನನ್ನ ಸುಯೋಗವೆಂದು ಭಾವಿಸುವೆ ಎಂದರು.
ನಾನು ದೇಹಲಿಗೆ ಹೋಗುತ್ತೆನೆ. ರಾಜೀನಾಮೆ ನೀಡುತ್ತೇವೆ ಎಂಬುದು ಉಹಾಪೋಹ. ಯಡಿಯೂರಪ್ಪ ಮತ್ತು ಸಿ.ಎಂ ಭೊಮ್ಮಾಯಿ ಜೊತೆ ಮಾತುಕತೆ ನಡೆಸಿದ್ದೇನೆ. ನನಗೆ ಯಡಿಯೂರಪ್ಪ ಬಳಿ ಹೇಳುವುದು ಏನಿಲ್ಲ. ನಾನು ವರಿಷ್ಠರನ್ನ ಭೇಟಿಯಾಗುತ್ತೆನೆಂದು ಹೇಳಿಯೇ ಇಲ್ಲ ಎಂದು ಪುನರುಚ್ಚರಿಸಿದರು.
ನಾನು ಪಕ್ಷದಲ್ಲಿಯೆ ಇರುತ್ತೇನೆ, ಹಿರಿಯರ ಮಾತಿಗೆ ಗೌರವ ಕೊಡುತ್ತೇನೆ. ಧ್ವಜಾರೋಹಣ ನಂತರ ನಾನು ಬೆಂಗಳೂರಿಗೆ ಹೋಗುತ್ತೇನೆ. ಖಾತೆ ವಿಚಾರವಾಗಿ ಏನೆ ಚರ್ಚೆ ಮಾಡಿದರೂ ಬೊಮ್ಮಾಯಿ ಬಳಿಯೆ ಮಾಡುತ್ತೇನೆ. ನನ್ನ ಮನವಿಯನ್ನ ತಲುಪಸಿಬೇಕಾದವರಿಗೆ ತಲುಪಿಸಿದ್ದೇನೆ. ಬೊಮ್ಮಾಯಿಯವರು ಈ ಬಗ್ಗೆ ಪರಿಶೀಲಿಸಿ ತಿಳಿಸಲಿದ್ದಾರೆ. ಅವರ ನಿರ್ಧಾರಕ್ಕೆ ಕಾದಿರುವೆ ಎಂದು ಅವರು ಸ್ಪಷ್ಟಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮೋದಿ ಮೆಹಂಗಾಯ್ ಮ್ಯಾನ್, ಪ್ರತಿದಿನ ಪೆಟ್ರೋಲ್ ಬೆಲೆ ಹೆಚ್ಚಿಸಿ ಪಿಕ್ ಪಾಕೆಟ್: ರಣದೀಪ್ ಸುರ್ಜೇವಾಲ, ಡಿಕೆಶಿ ಜಂಟಿ ಹೇಳಿಕೆ

ಮಗುವಿಗಾಗಿ ಈ ಬಡ ತಂದೆ ಸೈಕಲ್ ನಲ್ಲಿ ಮಾಡಿದ ಸೀಟ್ ಯಾವ ಕಾರ್ ಗೂ ಕಮ್ಮಿಯಿಲ್ಲ ಗುರೂ.. Video

Video: ಕೊಯಮತ್ತೂರಿನಲ್ಲಿ ಬಾಲಕಿ ರೇಪ್ ಕೇಸ್: ಪತ್ರಿಕಾಗೋಷ್ಠಿಯಲ್ಲಿ ಪೊಲೀಸರು ಜೋಕ್ ಮಾಡಿದ್ದು ನಿಜಾನಾ

ಮುಂದಿನ ಸುದ್ದಿ
Show comments