Select Your Language

Notifications

webdunia
webdunia
webdunia
webdunia

ಬಿಜೆಪಿ, ಜೆಡಿಎಸ್​ಗೆ ನಾನೇ ಟಾರ್ಗೆಟ್; ಸಿದ್ದರಾಮಯ್ಯ

ಬಿಜೆಪಿ, ಜೆಡಿಎಸ್​ಗೆ ನಾನೇ ಟಾರ್ಗೆಟ್; ಸಿದ್ದರಾಮಯ್ಯ
ವಿಜಯಪುರ , ಭಾನುವಾರ, 24 ಅಕ್ಟೋಬರ್ 2021 (17:46 IST)
ವಿಜಯಪುರ : ಬೈಎಲೆಕ್ಷನ್‌ನಲ್ಲಿ ಬಿಜೆಪಿ, ಕಾಂಗ್ರೆಸ್‌ಗೆ ನೇರ ಸ್ಪರ್ಧೆ ಇದೆ. ಜೆಡಿಎಸ್ ಕಣದಲ್ಲಿದ್ರೂ ಸಹ ಸ್ಪರ್ಧೆಯಲ್ಲಿ ಇಲ್ಲ.
ಜೆಡಿಎಸ್ಗೂ ನಾನೇ ಟಾರ್ಗೆಟ್, ಬಿಜೆಪಿಗೂ ನಾನೇ ಟಾರ್ಗೆಟ್. ಏಕೆಂದರೆ ಇಬ್ಬರಿಗೂ ನನ್ನನ್ನು ಕಂಡರೆ ಭಯವಾಗುತ್ತೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಸಿಂದಗಿಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮಾತನಾಡಿದ್ದಾರೆ.
ಹೆಚ್.ಡಿ. ಕುಮಾರಸ್ವಾಮಿ, ಹೆಚ್.ಡಿ. ದೇವೇಗೌಡರು ನನ್ನ ವಿರುದ್ಧ ಬಾಣ ಬಿಡ್ತಿದ್ದಾರೆ. ಸಿಂದಗಿಯಲ್ಲಿ ಜೆಡಿಎಸ್ ಗೆಲ್ಲಲ್ಲ. ಆದ್ರೂ ಕುಟುಂಬ ಇಲ್ಲೇ ಇದೆ. ದೇವೇಗೌಡರ ಪೂರ್ತಿ ಫ್ಯಾಮಿಲಿ ಇಲ್ಲೇ ಇದೆ. ನಾನು ಅವತ್ತೇ ಹೇಳಿದ್ದೆ ಇದು ಜೆಡಿಎಸ್ ಅಲ್ಲ ಜೆಡಿಎಫ್. ಜೆಡಿ ಫ್ಯಾಮಿಲಿ. ಜೆಡಿಎಸ್ ಕುಟುಂಬದ ಪಕ್ಷ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

‘ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಬಹುದೊಡ್ಡ ದಾಖಲೆಗಳನ್ನೇ ನಿರ್ಮಿಸಿದೆ!