Select Your Language

Notifications

webdunia
webdunia
webdunia
webdunia

ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ ಎಂದ ಶಾಸಕ

ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ ಎಂದ ಶಾಸಕ
ಚಾಮರಾಜನಗರ , ಶುಕ್ರವಾರ, 14 ಸೆಪ್ಟಂಬರ್ 2018 (14:23 IST)
ಬಿಜೆಪಿಯಲ್ಲಿ ನಾನು ನಿಷ್ಠಾವಂತ ಕಾರ್ಯಕರ್ತನಾಗಿದ್ದೇನೆ. ಯಾವ ಜೆಡಿಎಸ್ ನಾಯಕರೂ ನನ್ನನ್ನು ಸಂಪರ್ಕಿಸಿಲ್ಲ. ನಾವೆಲ್ಲ ಒಟ್ಟಾಗಿದ್ದೇವೆ ಎಂದು ಬಿಜೆಪಿ ಶಾಸಕ ಹೇಳಿಕೊಂಡಿದ್ದಾರೆ.

ನಾನು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ಎಸ್. ಯಡಿಯೂರಪ್ಪನವರ ನಾಯಕತ್ವ, ಸಂಘ ಪರಿವಾರದ  ಹಿನ್ನೆಲೆಯಲ್ಲಿ ಬೆಳೆದವನು. ಮಾಧ್ಯಮಗಳಲ್ಲಿ ಬರುತ್ತಿರುವುದು ಕೇವಲ ಊಹಾಪೋಹ ಸುದ್ದಿಗಳು. ಯಾವ ಜೆಡಿಎಸ್ ನಾಯಕರು ನನ್ನನ್ನು ಸಂಪರ್ಕ ಮಾಡಿಲ್ಲ. ಅದರ ಅವಶ್ಯಕತೆಯೂ ನನಗಿಲ್ಲ ಎಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಬಿಜೆಪಿ ಶಾಸಕ ನಿರಂಜನ್ ಕುಮಾರ್ ಹೇಳಿಕೆ ನೀಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ  ನೇತೃತ್ವದಲ್ಲಿ ನಾವೆಲ್ಲಾ ಒಗ್ಗಟ್ಟಾಗಿದ್ದೇವೆ.  ಬೇರೆ ಪಕ್ಷಗಳತ್ತ ನಾನು ಮುಖಮಾಡಿಲ್ಲ. ಅದರ ಅಗತ್ಯವೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಗಣೇಶ ಮೂರ್ತಿ ಮೆರವಣಿ: ಲಾಠಿ ಬೀಸಿದ ಪೊಲೀಸರು