Webdunia - Bharat's app for daily news and videos

Install App

ಶಿಕ್ಷಣ ಸಚಿವ ಸ್ಥಾನದ ಆಕಾಂಕ್ಷಿ ನಾನೇ ಎಂದ ಹೊರಟ್ಟಿ

Webdunia
ಶನಿವಾರ, 4 ಮೇ 2019 (18:11 IST)
ಮೈತ್ರಿ ಸರ್ಕಾರದಲ್ಲಿ ಮಂತ್ರಿ ಮಾಡದೇ ಇರುವುದು ನನಗೆ ಅಲರ್ಜಿ. ನಾನು ಶಿಕ್ಷಣ ಇಲಾಖೆ ಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದು, ರಾಜ್ಯಕ್ಕೆ ಶಿಕ್ಷಣ ಮಂತ್ರಿ ಒಳ್ಳೆಯ ಸ್ಥಾನವಿತ್ತು. ಆದರೆ ನನಗೆ ಮಂತ್ರಿ ಮಾಡಬೇಕಿತ್ತು ಆದ್ರೆ  ಮಾಡಲಿಲ್ಲಾ ಅಂತ ಹಿರಿಯ ಎಂಎಲ್ಸಿ ಮತ್ತೆ ತಮ್ಮ ಅಸಮಧಾನ ಹೊರಹಾಕಿದ್ದಾರೆ.

ಧಾರವಾಡದಲ್ಲಿ ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿಕೆ ನೀಡಿದ್ದು,  ನೀತಿ ಸಂಹಿತೆ ಇರುವುದರಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಿಎಂಗೆ ಬರಲ್ಲ ಎಂದರು.

ಅನಂತಕುಮಾರ ಹೆಗಡೆ ಸರ್ಕಾರ ಬಿಳುವ‌ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಅವರು ಭವಿಷ್ಯ ಯಾವಾಗ ಹೇಳಿದ್ದಾರೆ ಗೊತ್ತಿಲ್ಲ, ಅವರು ಭವಿಷ್ಯ ಹೇಳಿದ್ದರೆ ಎಲ್ಲರನ್ನ ಅವರ ‌ಬಳಿ ಕಳಿಸ್ತೇನೆ ಎಂದು ವ್ಯಂಗ್ಯವಾಡಿದ್ರು.

ಜಿ.‌ಟಿ. ದೇವೇಗೌಡ ಅವರು ಮೈತ್ರಿ ಧರ್ಮ ಪಾಲನೆ ಮಾಡಿಲ್ಲ ಎಂಬ ಹೇಳಿಕೆ ಸರಿಯಲ್ಲ. ಆ ರೀತಿ ಮಾತನಾಡುವ ಅವಶ್ಯಕತೆ ಇರಲಿಲ್ಲ. ನಾನು ಸಿದ್ದರಾಮಯ್ಯನವರ ಜೊತೆ ಇದ್ದೆ. ಈ ‌ಸರ್ಕಾರ ಬೀಳಬಾರದು ಎಂಬ ಅಭಿಪ್ರಾಯ ಎಲ್ಲರದ್ದೂ ಇದೆ ಎಂದರು.

23 ರ ನಂತರ ಸರ್ಕಾರ ಏನಾಗುತ್ತೆ ಗೊತ್ತಿಲ್ಲ. ಆದರೆ ಬಿಜೆಪಿಯವರು 104 ಜನ ಇದ್ದಾರೆ. ಆಗಲೇ ಅವರ ಸರ್ಕಾರ ಮಾಡಲು ಬಿಟ್ಟಿದ್ದರೆ ಬಿಡಬೇಕಿತ್ತು. ಇಲ್ಲಿ ಕೋಮುವಾದಿ ಪಕ್ಷ ಬರಬಾರದು ಎಂಬ ಉದ್ದೇಶದಿಂದ ಮೈತ್ರಿ ಸರ್ಕಾರ ಮಾಡಿದ್ದೇವೆ. ಕೆಲ‌ ನಾಯಕರು ಮನಸ್ಸಿಗೆ ಬಂದಂತೆ ಹೇಳಿಕೆ ನೀಡ್ತಾರೆ, ಅವರು ಮೊದಲು ಬಾಯಿಗೆ ಬೀಗ ಹಾಕಿಕೊಳ್ಳಬೇಕು ಎಂದ್ರು.

ಏನಿದ್ರು ಸಿಎಂ, ಡಿಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷರು ಮತನಾಡಬೇಕು. ತಲೆಗೊಬ್ಬ ಮಾತನಾಡಬಾರದು.
ನನಗೆ ಮಂತ್ರಿ ಮಾಡಿದ್ದರೆ ಯಾವುದೇ ರೀತಿಯ ಸಮಸ್ಯೆಗಳು ಆಗದಂತೆ ನೋಡಿಕೊಳ್ಳುತ್ತಿದ್ದೆ ಆದರೆ ಮಂತ್ರಿಯಾದ್ರೆ ಸಾಕು ಎಂದುಕೊಂಡಿದ್ದೆ. ನನ್ ನಸೀಬು ಸರಿ ಇಲ್ಲಾ ನಂದು ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

ಮುಂದಿನ ಸುದ್ದಿ
Show comments