Webdunia - Bharat's app for daily news and videos

Install App

ನಾನು ಎಂದಿನಂತೆ ಆರಾಮಾಗಿಯೇ ಇದ್ದೇನೆ: ಶಿವಣ್ಣ ಸ್ಪಷ್ಟನೆ

Webdunia
ಬುಧವಾರ, 7 ಅಕ್ಟೋಬರ್ 2015 (12:23 IST)
ವರ್ಕ್ ಔಟ್ ಮಾಡುವ ವೇಳೆ ತಮ್ಮ ಬಲ ಭುಜ ಹಾಗೂ ಎದೆಯಲ್ಲಿ ಸ್ವಲ್ಪ ಮಟ್ಟಿನ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಡಾ.ಶಿವರಾಜ್ ಕುಮಾರ್ ಅವರು ಇಂದು ಪ್ರತಿಕ್ರಿಯಿಸಿದ್ದು, ನಾನು ಎಂದಿನಂತೆ ಆರಾಮಾಗಿಯೇ ಇದ್ದೇನೆ, ಅಲ್ಲದೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.  
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ನನ್ನ ಮಗಳ ಮದುವೆ ಇದ್ದ ಕಾರಣ ಬ್ಯುಸಿಯಾಗಿದ್ದೆ. ಆದ ಕಾರಣ ಜಿಮ್ ವರ್ಕ್ ಔಟ್ ಮಾಡಲು ಸಾಧ್ಯವಾಗದೆ ನಿಲ್ಲಿಸಿದ್ದೆ. ಆದರೂ ಕಳೆದ ಎರಡು ದಿನಗಳಿಂದ ಮತ್ತೆ ಆರಂಭಿಸಿದ್ದೆ. ಈ ಹಿನ್ನೆಲೆಯಲ್ಲಿ ಸ್ವಲ್ಪ ನೋವು ಕಾಣಿಸಿಕೊಂಡಿತ್ತು. ಆದರೆ ಪ್ರಸ್ತುತ ಎಂದಿನಂತೆ ಆರೋಗ್ಯವಾಗಿದ್ದೇನೆ. ನಾಳೆ ಡಿಸ್ ಚಾರ್ಜ್ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದರು. 
 
ಇದೇ ವೇಳೆ, ನಾನು ಈ ಹಿಂದೆ ಕಿಲ್ಲಿಂಗ್ ವೀರಪ್ಪನ್ ಚಿತ್ರೀಕರಣ ಸಲುವಾಗಿ ಚಿಕ್ಕಮಗಳೂರಿಗೆ ತೆರಳಿದ್ದೆ. ಆ ವೇಳೆಯೂ ಕೂಡ ಇಂತಹ ಸಣ್ಣ ಪ್ರಮಾಣದ ನೋವು ಕಂಡು ಬಂದಿತ್ತು. ಆದರೆ ಪ್ರಸ್ತುತ ಚಿಕಿತ್ಸೆ ಪಡೆದಿದ್ದು ಚೆನ್ನಾಗಿದ್ದೇನೆ. ಮುಂದಿನ ವಾರ ಮತ್ತೆ ಚಿತ್ರೀಕರಣದಲ್ಲೂ ಭಾಗಿಯಾಗಲಿದ್ದೇನೆ ಎಂದು ಸ್ಪಷ್ಟಪಡಿಸಿದರು. 
 
ಇನ್ನು ನಿನ್ನೆ ವ್ಯಾಯಾಮ ಮಾಡುತ್ತಿದ್ದ ವೇಳೆ ಭುಜ ಹಾಗೂ ಎದೆಯಲ್ಲಿ ನೋವು ಕಾಣಿಸಿಕೊಂಡ ಪರಿಣಾಮ ಅವರನ್ನು ನಗರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಇಸಿಜಿ ನಡೆಸಿದ ವೈದ್ಯರಿಗೆ ಸ್ವಲ್ಪ ವ್ಯತ್ಯಾಸ ಕಂಡು ಬಂದಿದ್ದ ಹಿನ್ನೆಲೆಯಲ್ಲಿ ಅವರನ್ನು ಮತ್ತೆ ಮಲ್ಯಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಪ್ರಸ್ತುತ ಚಿಕಿತ್ಸೆ ಪಡೆಯುತ್ತಿರುವ ಶಿವಣ್ಣ ಪ್ರಸ್ತುತವೂ ಮಲ್ಯಾ ಆಸ್ಪತ್ರೆಯಲ್ಲಿಯೇ ಇದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments