Webdunia - Bharat's app for daily news and videos

Install App

ನಾನು ಮಂತ್ರಿಯಾಗಬಹುದು ಸಿಎಂ ಸಹ ಆಗಬಹುದು-ಉಮೇಶ್ ಕತ್ತಿ

Webdunia
ಬುಧವಾರ, 12 ಫೆಬ್ರವರಿ 2020 (11:12 IST)
ನವದೆಹಲಿ : ಬಿಜೆಪಿ ಶಾಸಕ ಉಮೇಶ್ ಕತ್ತಿಯವರು ಈಗಾಗಲೇ ನವದೆಹಲಿಗೆ ತೆರಳಿದ್ದು, ರಮೇಶ್ ಕತ್ತಿಗೆ ರಾಜ್ಯಸಭಾ ಟಿಕೆಟ್ ಕೇಳಲು ಬಂದಿದ್ದೇನೆ ಎಂದು ಉಮೇಶ್ ಕತ್ತಿ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಜೂನ್ ನಲ್ಲಿ 4ರಾಜ್ಯಸಭಾ ಸ್ಥಾನಗಳು ಖಾಲಿಯಾಗುತ್ತದೆ. ಈ ಪೈಕಿ ಒಂದು ಸ್ಥಾನ ನೀಡುವಂತೆ ಬಿಜೆಪಿ ಅಧ್ಯಕ್ಷ ನಡ್ಡಾರನ್ನು ಭೇಟಿಯಾಗಿ ಮನವಿ ಮಾಡುತ್ತೇನೆ. ಸಚಿವ ಸ್ಥಾನಕ್ಕೆ ಬದಲಾಗಿ ರಾಜ್ಯಸಭಾ ಸ್ಥಾನ ಕೇಳುತ್ತಿಲ್ಲ. ಉಮೇಶ್ ಕತ್ತಿ ಬೇರೆ, ರಮೇಶ್ ಕತ್ತಿ ಬೇರೆ.  ನಾವಿಬ್ಬರೂ ಸಹೋದರರು, ಆದರೆ ನಮ್ಮ ಜೀವನ ಬೇರೆ ಎಂದು ಹೇಳಿದ್ದಾರೆ.

 

ಮುಂದಿನ ದಿನಗಳಲ್ಲಿ ನನಗೂ ಸಚಿವ ಸ್ಥಾನ ಸಿಗಬಹುದು. ಪ್ರತಿಬಾರಿಯೂ ಪಟ್ಟಿಯಲ್ಲಿ ನನ್ನ ಹೆಸರು ಇರುತ್ತೆ. ಅಂತಿಮವಾಗುವ ವೇಳೆಗೆ ಪಟ್ಟಿಯಲ್ಲಿ ನನ್ನ ಹೆಸರು ಇರಲ್ಲ. ಬಿಜೆಪಿ ಹೈಕಮಾಂಡ್ ನಾಯಕರಿಗೆ ಇದೆಲ್ಲವೂ ಗೊತ್ತಿದೆ. ನಾನು ಇನ್ನೂ ಎರಡು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವೆ.  ನಾನು ಮಂತ್ರಿಯಾಗಬಹುದು ಸಿಎಂ ಸಹ ಆಗಬಹುದು ಎಂದು ಅವರು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments