Select Your Language

Notifications

webdunia
webdunia
webdunia
webdunia

ಗೃಹಖಾತೆಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ: ರಾಮಲಿಂಗಾರೆಡ್ಡಿ

ಗೃಹಖಾತೆಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ: ರಾಮಲಿಂಗಾರೆಡ್ಡಿ
ಬೆಂಗಳೂರು , ಶುಕ್ರವಾರ, 1 ಸೆಪ್ಟಂಬರ್ 2017 (20:02 IST)
ಕಳೆದ ವಾರ ಹಿಂದೆಯೇ ಗೃಹ ಖಾತೆ ನಿಭಾಯಿಸುವಂತೆ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಅವರ ಆಶಯದಂತೆ ಗೃಹಖಾತೆಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ನೂತನ ಗೃಹಖಾತೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ 
  
ಈಗಾಗಲೇ ನಾಲ್ಕು ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ. ಅದರಂತೆ, ಗೃಹಖಾತೆಯನ್ನು ಯಶಸ್ವಿಯಾಗಿ ನಿಭಾಯಿಸುತ್ತೇನೆ. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇನೆ. ಯಾವುದೇ ರೀತಿ ಭಂಗ ತರುವುದಿಲ್ಲ ಎಂದು ಭರವಸೆ ನೀಡಿದ್ದಾರೆ.
 
ಗೃಹಖಾತೆಗಾಗಿ ರಮಾನಾಥ್ ರೈ ಮತ್ತು ನನ್ನ ಮಧ್ಯೆ ಪೈಪೋಟಿಯಿರಲಿಲ್ಲ. ಸಿಎಂ ಸಿದ್ದರಾಮಯ್ಯನವರ ಆದೇಶದಂತೆ ಖಾತೆಯನ್ನು ಹಂಚಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
 
ಕೆಂಪಯ್ಯನವರು ಗೃಹ ಇಲಾಖೆಯನ್ನು ನಡೆಸುತ್ತಿದ್ದಾರೆ ಎನ್ನುವ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ನೂತನ ಗೃಹ ಖಾತೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ರಮಾನಾಥ್ ರೈ ಬದಲಿಗೆ ರಾಮಲಿಂಗಾರೆಡ್ಡಿಗೆ ಗೃಹಖಾತೆ