Select Your Language

Notifications

webdunia
webdunia
webdunia
webdunia

ಜೈಲಿಗೆ ಹಾಕಿ, ನೇಣಿಗೆ ಹಾಕಿ ನಿಮ್ಮನ್ನು ನಾನು ತಡೆಯುವುದಿಲ್ಲ: ಕುಮಾರಸ್ವಾಮಿ

ಜೈಲಿಗೆ ಹಾಕಿ, ನೇಣಿಗೆ ಹಾಕಿ ನಿಮ್ಮನ್ನು ನಾನು ತಡೆಯುವುದಿಲ್ಲ: ಕುಮಾರಸ್ವಾಮಿ
ಬೆಂಗಳೂರು , ಬುಧವಾರ, 24 ಮೇ 2017 (15:45 IST)
ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ನಿಮ್ಮ ಬಳಿ ದಾಖಲೆ ಇದ್ದರೆ ಏನ್ ಬೇಕಾದ್ರೂ ಮಾಡಿ ನಾನು ತಡೆಯುವುದಿಲ್ಲ ಎಂದು ಹೇಳಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವೇಳೆ, ನಿಮ್ಮ ಬಳಿ ದಾಖಲೆಗಳಿದ್ದಲ್ಲಿ ನನ್ನನ್ನು ಜೈಲಿಗೆ ಹಾಕಿ, ನೇಣಿಗೆ ಹಾಕಿ ನಿಮ್ಮನ್ನು ನಾನು ತಡೆಯುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ಪ್ರಸಕ್ತ ರಾಜಕೀಯ ಪರಿಸ್ಥಿತಿಯಲ್ಲಿ ಮಹಾತ್ಮಾ ಗಾಂಧಿಯಿದ್ದರೂ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತಿತ್ತು. ಇಲ್ಲವೇ ರಾಜಕೀಯ ನಿವೃತ್ತಿ ಹೊಂದಬೇಕಾಗುತ್ತಿತ್ತು ಅಂತಹ ವಾತಾವರಣವಿದೆ ಎಂದರು.
 
ದೇವೇಗೌಡರ ಕುಟುಂಬ 20 ಸಾವಿರ ಕೋಟಿ ರೂ ಹಣವನ್ನು ಲೂಟಿ ಹೊಡೆದಿದೆ ಎಂದು ಕಾಂಗ್ರೆಸ್ ಕಾರ್ಯಕರ್ತ ವೆಂಕಟೇಶ್‌ಗೌಡ್ ಎನ್ನುವವರು ಆದಾಯ ತೆರಿಗೆ ಇಲಾಖೆಗೆ ದೂರು ನೀಡಿದ್ದಾರೆ.
 
ಆದರೆ, ಆರೋಪವನ್ನು ತಳ್ಳಿಹಾಕಿದ ಕುಮಾರಸ್ವಾಮಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಕುಮ್ಮಕ್ಕಿನ ಮೇರೆಗೆ ದೂರು ದಾಖಲಿಸಲಾಗಿದೆ. ಅದಕ್ಕೆ ನನ್ನ ಬಳಿ ಸಾಕ್ಷ್ಯಾಧಾರಗಳಿವೆ ಎಂದು ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

20 ಸಾವಿರ ಕೋಟಿ ಲೂಟಿ ಆರೋಪಕ್ಕೆ ಕುಮಾರಸ್ವಾಮಿ ತಿರುಗೇಟು