Publish Date: Tue, 19 Sep 2017 (13:12 IST)
Updated Date: Tue, 19 Sep 2017 (13:14 IST)
ನಾನು ರಾಜ್ಯದ 224 ಕ್ಷೇತ್ರಗಳಲ್ಲಿ ಎಲ್ಲಿ ನಿಂತ್ರೂ ಗೆಲ್ಲುತ್ತೇನೆ. ನಾನು ಎಲ್ಲಿ ಸ್ಪರ್ಧಿಸಬೇಕು ಎನ್ನುವ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೋಲಾರದಲ್ಲಿ ಸ್ಪರ್ಧಿಸುವಂತೆ ಮಾಜಿ ಸಭಾಪತಿ ಸುದರ್ಶನ್ ಸೋನಿಯಾ ಗಾಂಧಿಯವರಿಗೆ ಬರೆದ ಪತ್ರದ ಪ್ರತಿಕ್ರಿಯೆ ನೀಡಿದ ಅವರು, ನಾನು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎನ್ನುವುದು ಪಕ್ಷದ ಹೈಕಮಾಂಡ್ಗೆ ಬಿಟ್ಟ ವಿಚಾರವಾಗಿದೆ. ಹೈಕಮಾಂಡ್ ನೀಡುವ ಆದೇಶಕ್ಕೆ ಬದ್ಧವಾಗಿದ್ದೇನೆ ಎಂದು ತಿಳಿಸಿದ್ದಾರೆ.
ಯಡಿಯೂರಪ್ಪ ಸರಕಾರದ ವಿರುದ್ಧ ಚಾರ್ಜ್ಶೀಟ್ ಹಾಕುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ವೈ ಯಾವತ್ತಾದರೂ ಸತ್ಯ ಹೇಳಿದ್ದಾರಾ? ಬರೀ ಸುಳ್ಳು ಹೇಳುವುದೇ ಅವರ ಕಾಯಕವಾಗಿದೆ ಎಂದು ತಿರುಗೇಟು ನೀಡಿದ್ದಾರೆ.
ಬಿಎಸ್ವೈ ಸುಳ್ಳಿನ ಸರದಾರ. ಇನ್ನೂ ಯಾವ ಚಾರ್ಜ್ಶೀಟ್ ಬಿಡುಗಡೆ ಮಾಡ್ತಾರೆ. ಅವರ ಹೇಳಿಕೆಗಳಿಗೆಲ್ಲಾ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಅದೆಲ್ಲಾ ಚಿಲ್ಲರೆ ವಿಷಯಗಳು ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.