ಗುಂಡಿಟ್ಟು ಹೊಡೆಯುವ ಹೇಳಿಕೆಗೆ ಈಗಲೂ ಬದ್ಧ: ಮುತಾಲಿಕ್

Webdunia
ಬುಧವಾರ, 8 ಜೂನ್ 2022 (21:32 IST)
ಹುಬ್ಬಳ್ಳಿ: ಸುಪ್ರೀಂಕೋರ್ಟ್ ನಿಯಮ ಪಾಲಿಸದೆ ಇರುವವರ ಮೇಲೆ ಗುಂಡಿಟ್ಟು ಹೊಡಿಯೋ ಹೇಳಿಕೆಗೆ ನಾನು ಈಗಲೂ ಬದ್ಧ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಪುನರುಚ್ಚಾರ ಮಾಡಿದ್ದಾರೆ.
ಕೇಶ್ವಾಪೂರ ಮಧುರಾ ಕಾಲೋನಿಯಲ್ಲಿರುವ ಜಗದೀಶ್ ಮನೆ ಎದುರು ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಧ್ವನಿವರ್ಧಕ ವಿಚಾರದಲ್ಲಿ ಸುಪ್ರೀಂಕೋರ್ಟ್ ನಿಯಮ ಪಾಲನೆ ಮಾಡೋಕೆ ಆಗಿಲ್ಲಾಂದ್ರೆ ರಾಜಿನಾಮೆ ಕೊಡಿ. ನನ್ನ ಕೈಗೆ ಅಧಿಕಾರ ಕೊಟ್ಟು ನೋಡಿ ಯಾರು ಕಾನೂನು ಪಾಲನೆ ಮಾಡಲು ಅವರಿಗೆ ಗುಂಡ್ಲಪೇಟೆ ಗತಿಯಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಬಿಜೆಪಿ ನಮ್ಮಂತಹ ಸಂಘಟನೆಗಳ ಶ್ರಮದಿಂದಲೇ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಜನಪ್ರತಿನಿಧಿಗಳಿಗೆ ಎಚ್ಚರಿಕೆ ಕೊಡಲೆಂದೇ ಇವತ್ತು ಹೋರಾಟ ಮಾಡ್ತಿದ್ದೇವೆ. ಧ್ವನಿವರ್ಧಕ ವಿಚಾರದಲ್ಲಿ ಸುಪ್ರಿಂಕೋರ್ಟ್ ಆದೇಶ ನೀಡಿ 15ವರ್ಷಗಳಾಗಿದೆ. ಆದರೆ ಸುಪ್ರೀಂಕೋರ್ಟ್ ಆದೇಶ ಇನ್ನೂ ಜಾರಿಯಾಗ್ತಿಲ್ಲ. ನೀವು ಇದೇ ರೀತಿ ನಿರ್ಲಕ್ಷ್ಯ ಮಾಡಿದರೆ ನಿಮ್ಮ ಮನೆಗಳ ಮುಂದೆಯೇ ಭಜನೆ ಆರಂಭಿಸುತ್ತೇವೆ ಎಂದರು.
ಬಿಜೆಪಿ ಶಾಸಕರು ಮತ್ತು ಅಧ್ಯಕ್ಷರ ಮನೆ ಮುಂದೆಯೇ ಮೈಕ್ ಇಟ್ಟುಕೊಂಡು ಭಜನೆ ನಡೆಸುತ್ತೇವೆ. ಬರೀ ಹಿಂದೂಗಳ ವೋಟ್ ತೆಗೆದುಕೊಳ್ಳುವುದು ಮಾತ್ರ ಅಲ್ಲ .ಹಿಂದೂಗಳ ಸಮಸ್ಯೆಯನ್ನು ಅರಿತು ಕೊಳ್ಳಬೇಕು ಎಂದರು.
ಯೋಗಿ ಆದಿತ್ಯನಾಥನ ರೀತಿಯಲ್ಲಿ ಬಸವರಾಜ ಬೊಮ್ಮಾಯಿಯವರು ಗಟ್ಟಿಯಾಗಿ ನಿಲ್ಲಬೇಕು. ಅದರ ಬದಲಿಗೆ ಇದೇ ರೀತಿಯ ನಾಟಕ ಮಾಡಿದ್ರೆ ಸುಮ್ಮನೆ ಇರುವುದಿಲ್ಲ. ಕಣ್ಣೀರು ಒರೆಸುವ ತಂತ್ರಗಾರಿಕೆ ಬಿಡಬೇಕು ಎಂದು ಕಿಡಿಕಾರಿದರು.
ನಿಮ್ಮ ಕೈಲಿ ಆಗದೇ ಇದ್ದಲ್ಲಿ ರಾಜೀನಾಮೆ ಕೊಡಿ. ನನಗೆ ಅಧಿಕಾರ ಕೊಡಿ 24 ಗಂಟೆಯಲ್ಲಿ ಅದನ್ನು ಮಾಡಿ ತೋರಿಸುತ್ತೇನೆ. ಪಾಲಿಸದೆ ಇದ್ದವರ ಮೇಲೆ ಗುಂಡು ಹಾರಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಮೇನಿಗೆ ಉತ್ತಮ ಬಾಂಧವ್ಯವಿದ್ದ ಭಾರತದೊಂದಿಗೆ ಯಾವುದೇ ಸಂಘರ್ಷವಿಲ್ಲ: ಇರಾನ್ ಸರ್ವೋಚ್ಛ ನಾಯಕನ ರಾಯಭಾರಿ

ಮಗುವನ್ನು ಕೈಯಲ್ಲಿ ಹಿಡಿದುಕೊಂಡಿರುವಾಗಲೇ ಲಿಫ್ಟ್‌ನಲ್ಲಿ ಹೀಗಾಗುವುದಾ, ಮೈ ಜುಮ್ಮೆನಿಸುತ್ತದೆ ಈ Video

ಸಿಎಂ ನಿತೀಶ್ ಕುಮಾರ್ ಲ್ಯಾಂಡ್ ಆಗಬೇಕಿದ್ದ ಹೆಲಿಪ್ಯಾಡ್‌ಗೆ ಎಂಟ್ರಿಕೊಟ್ಟ ಗೂಳಿ, ಪೊಲೀಸಪ್ಪನ ಓಟ ನೋಡಿ, Video

ತಮ್ಮ ಮಗನನ್ನು ಬೆಳೆಸಿ ಅಂತಾ ಹೇಳಲು ಇದೇನೂ ರಾಜರ ಆಡಳಿತನಾ: ಸಿದ್ದರಾಮಯ್ಯಗೆ ಅಶೋಕ್‌ ಕೌಂಟರ್‌

Video: ಎಂಥಾ ಕಷ್ಟದಲ್ಲಿ ಓದುತ್ತಿರುವ ಮಕ್ಕಳು: ನಿಜವಾಗಿ ಮೀಸಲಾತಿ ಈ ಮಕ್ಕಳಿಗೆ ಕೊಡಬೇಕು ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments