Webdunia - Bharat's app for daily news and videos

Install App

ಅವರು ಕೇಳಿದಾಗ ನಾನು ಒಪ್ಪಬಾರದಿತ್ತು: ಟಿ.ಎನ್.ಸೀತಾರಾಂ

Webdunia
ಮಂಗಳವಾರ, 24 ಅಕ್ಟೋಬರ್ 2017 (14:43 IST)
ಬೆಂಗಳೂರು: ವಿಧಾನಸೌಧ ವಜ್ರಮಹೋತ್ಸವ ಸಾಕ್ಷ್ಯಚಿತ್ರಕ್ಕೆ ಕೋಟಿ ರೂ. ಖರ್ಚು ಮಾಡುವ ಅಗತ್ಯವೇನಿತ್ತು ಎಂದು ಟೀಕೆಗಳು ಬಂದ ಹಿನ್ನೆಲೆಯಲ್ಲಿ ಈ ಪ್ರಾಜೆಕ್ಟ್ನಿಂದ ಹೊರಬರಲು ಟಿ.ಎನ್.ಸೀತಾರಾಂ ನಿರ್ಧರಿಸಿದ್ದಾರಂತೆ.

ಹೀಗಂತ ಅವರೇ ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ. `ಶಾಸನ ಸಭೆ ನಡೆದು ಬಂದ ದಾರಿ - 7 ಚಿತ್ರದ ಪೈಕಿ ಎರಡನ್ನು ಮುಗಿಸಿದ್ದೇನೆ. ಅವರಿಗೆ ಕೊಟ್ಟು ಕೈ ಮುಗಿದು ಬರುತ್ತೇನೆ. ಮಿಕ್ಕ 5 ಮಾಡಲಾರೆ. ಅವರು ಹಿಂದೆ ಹೇಳಿದಂತೆ ಪೂರ್ತಿ ಹಣ ಕೊಡುತ್ತೇನೆಂದರೂ ನನಗೆ ಬೇಡ. ಬೇರೆ ಯಾರಿಗಾದರೂ ಕೊಡಲಿ. ಯಾವುದೇ ಸರ್ಕಾರದ ಹಣ involve ಆದ ಕೆಲಸಗಳ ಸಹವಾಸ ಬೇಡ. ಅವರು ಕರೆದಾಗ ನಾನು ಒಪ್ಪಬಾರದಿತ್ತು. ಒಳ್ಳೆಯ product ಮಾಡಲು ಹೋಗಿ ತೀವ್ರ ಅವಮಾನ ಮತ್ತು ನೋವು ಅನುಭವಿಸಿದೆ. ಈ ಸಮಯದಲ್ಲಿ ನನಗೆ ಮಾನಸಿಕ ಸ್ಥೈರ್ಯ ಕೊಟ್ಟ ಎಲ್ಲರಿಗೆ ಕೃತಜ್ಞ’ ಎಂದು ಬರೆದುಕೊಂಡಿದ್ದಾರೆ.

ಸೀತಾರಾಂ ಸಾಕ್ಷ್ಯಚಿತ್ರ ಮಾಡುವ ಸಲುವಾಗಿ, `ಡ್ರಾಮಾ ಜ್ಯೂನಿಯರ್ಸ್' ಸೀಸನ್ 2ರಿಂದ ಹೊರಬಂದಿದ್ದರು. ಅವರ ಸಿನಿಮಾ `ಕಾಫಿತೋಟ’ ಅಮೆರಿದಲ್ಲಿ ಪ್ರದರ್ಶನವಾದಾಗಲೂ ಅಲ್ಲಿಗೆ ಹೋಗದೆ ಸಾಕ್ಷ್ಯಚಿತ್ರದಲ್ಲಿ ಬ್ಯುಸಿಯಾಗಿದ್ದರು ಎನ್ನಲಾಗಿದೆ. ಈಗ ಟೀಕೆಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಬೇಸರಗೊಂಡಿದ್ದು, ಪ್ರಾಜೆಕ್ಟ್ ನಿಂದ ಹೊರಬರುವುದಕ್ಕೆ ನಿರ್ಧರಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ