Publish Date: Thu, 31 Aug 2017 (17:02 IST)
Updated Date: Thu, 31 Aug 2017 (17:04 IST)
ನಾನು ನಾಡ ವಿರೋಧಿ ಹೇಳಿಕೆ ನೀಡಿಲ್ಲ. ನನಗೆ ಅದರ ಅಗತ್ಯತೆ ಅನಿವಾರ್ಯತೆಯೂ ಇಲ್ಲ ಎಂದು ಮಹಿಳಾ ಘಟಕದ ಅಧ್ಯಕ್ಷೆ ಹಿರಿಯ ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟೀಕರಣ ನೀಡಿದ್ದಾರೆ.
ಮಹಾರಾಷ್ಟ್ರಕ್ಕೆ ಜೈ ಎನ್ನುವ ವಿವಾದಾತ್ಮಕ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ಭಾಷಣದಲ್ಲಿ ಕೆಲವೊಂದು ಸಾರಾಂಶ ಮಾತ್ರ ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನನಗೆ ಮತ್ತು ಪಕ್ಷಕ್ಕೆ ಕೆಟ್ಟ ಹೆಸರು ತರಲು ಕೆಲವರು ಪ್ರಯತ್ನಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ಮಾಜಿ ಸಚಿವ ಸತೀಶ್ ಜಾರಕಿಹೊಳಿಗೆ ಟಾಂಗ್ ನೀಡಿದ್ದಾರೆ.
ಗಡಿವಿವಾದದ ಬಗ್ಗೆ ಅರ್ಧಸತ್ಯ ತಿಳಿಸುವ ಹಿಂದೆ ನಮ್ಮ ಜೆಲ್ಲೆಯ ಕೆಲವು ನಾಯಕರ ಹುನ್ನಾರವಿದೆ. ನನ್ನ ತಾಯ್ನಾಡಿನ ಬಗ್ಗೆ ಅಪಾರ ಗೌರವಿದೆ. ನನ್ನ ಭಾಷಣದಿಂದ ಯಾರಿಗಾದರೂ ನೋವಾದಲ್ಲಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.