Webdunia - Bharat's app for daily news and videos

Install App

ನಾನು ಪಕ್ಷಾಂತರ ಮಾಡಲ್ಲ: ಸಚಿವ ಪ್ರಮೋದ್ ಮಧ್ವರಾಜ್

Webdunia
ಮಂಗಳವಾರ, 17 ಅಕ್ಟೋಬರ್ 2017 (17:46 IST)
ಉಡುಪಿ: ನಾನು ಪಕ್ಷಾಂತರ ಮಾಡಲ್ಲ. ಅನಂತ್ ಕುಮಾರ್ ಭೇಟಿಯಾಗಲೆಂದು ಐಬಿಗೆ ಹೋಗಿಲ್ಲ ಎಂದು ಸಚಿವ ಪ್ರಮೋದ್ ಮಧ್ವರಾಜ್ ಸ್ಪಷ್ಟನೆ ನೀಡಿದ್ದಾರೆ.

ಅನಂತ್ ಭೇಟಿಗೆಂದು ಐಬಿಗೆ ಹೋಗಿರಲಿಲ್ಲ. ನಾನು ಭೇಟಿ ನೀಡಿದ್ದ ಸಂದರ್ಭದಲ್ಲಿ ಅನಂತ್ ಕುಮಾರ್ ಅಲ್ಲಿದ್ದರು. ಕೇಂದ್ರ ಸಚಿವರನ್ನು ಮಾತಾಡಿಸುವುದು ನಮ್ಮ ಕರ್ತವ್ಯ. ನಾವಿಬ್ಬರೇ ಕೂತು ಮಾತನಾಡಿಲ್ಲ. ಹಲವು ಮಂದಿ ಇದ್ದರು. ಸೌಜನ್ಯಕ್ಕಾಗಿ ಅವರ ಜೊತೆ ಕುಶಲೋಪರಿ ನಡೆಸಿದ್ದೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಹೇಳಿದರು.

ಕೆಲ ಮಾಧ್ಯಮಗಳು ಸ್ಪಷ್ಟೀಕರಣ ನೀಡಿದರೂ ಅಪಪ್ರಚಾರ ಮಾಡುತ್ತಿವೆ. ನಾನು ಅಮಿತ್ ಷಾರನ್ನು ಈವರೆಗೂ ನೋಡಿಲ್ಲ. ಅವರ ಭೇಟಿ ವಿಚಾರ ಸಹ ಸುಳ್ಳು ಎಂದು ಸ್ಪಷ್ಟೀಕರಣ ನೀಡಿದ್ದಾರೆ.

ಇತ್ತೀಚೆಗೆ ಕೇಂದ್ರ ಸಚಿವ ಅನಂತ್ ಕುಮಾರ್ ಜತೆಗಿದ್ದ ಸಚಿವ ಪ್ರಮೋದ್ ಮಧ್ವರಾಜ್‌ ಫೋಟೊ ವೈರಲ್ ಆಗಿತ್ತು. ಹೀಗಾಗಿ ಅವರು ಬಿಜೆಪಿ ಸೇರುತ್ತಾರೆ ಅನ್ನೋ ಮಾತುಗಳು ಕೇಳಿಬಂದಿತ್ತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments