Select Your Language

Notifications

webdunia
webdunia
webdunia
webdunia

ಕ್ರೌರ್ಯ ಮೆರೆದು 'ಕಾಗೆ' ಹಾರಿಸಿದ ಬಿಜೆಪಿ ಶಾಸಕ!

ಕ್ರೌರ್ಯ ಮೆರೆದು 'ಕಾಗೆ' ಹಾರಿಸಿದ ಬಿಜೆಪಿ ಶಾಸಕ!
ಬೆಳಗಾವಿ , ಸೋಮವಾರ, 9 ಜನವರಿ 2017 (12:23 IST)
ಕಾಂಗ್ರೆಸ್ ನಾಯಕ ವಿವೇಕ ಶೆಟ್ಟಿ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೂ ನನಗೂ ಸಂಬಂಧ ಇಲ್ಲ ಎಂದು ಕಾಗವಾಡ ಕ್ಷೇತ್ರದ ಬಿಜೆಪಿ ಶಾಸಕ ರಾಜು ಕಾಗೆ ಹಾರಿಸಿದ್ದಾರೆ.
 
ಖಾಸಗಿ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಯುವ ನಾಯಕ ವಿವೇಕ ಶೆಟ್ಟಿ ನನಗೆ ಪರಿಚಯಸ್ಥ. ಆದರೆ, ಆತನ ಮೇಲೆ ನಡೆದ ಮಾರಣಾಂತಿಕ ಹಲ್ಲೆಗೂ ನನಗೂ ಯಾವುದೇ ಸಂಬಂಧ ಇಲ್ಲ. ನಾನು ಎಪಿಎಂಸಿ ಚುನಾವಣಾ ಪ್ರಚಾರದಲಿದ್ದೇನೆ. ನನ್ನ ತೇಜೋವಧೆಗಾಗಿ ಷಡ್ಯಂತ್ರ ನಡೆದಿದೆ ಎಂದಿದ್ದಾರೆ.
 
ಫೇಸ್‌ಬುಕ್‌ನಲ್ಲಿ ಕೆಟ್ಟದಾಗಿ ಕಮೆಂಟ್ ಮಾಡಿದ್ದಕ್ಕೆ ಕಾಂಗ್ರೆಸ್ ನಾಯಕನ ಮನೆಗೆ ನುಗ್ಗಿ ಬಿಜೆಪಿ ಶಾಸಕ ರಾಜು ಕಾಗೆ ಪುತ್ರಿ ಹಾಗೂ ಟೀಂ ಡೆಡ್ಲಿ ಅಟ್ಯಾಕ್ ಮಾಡಿದ ಘೋರ ಕೃತ್ಯ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಉಗಾರ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿತ್ತು. 
 
ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಅವರ ರೌಡಿ ಗ್ಯಾಂಗ್, ಫೇಸ್‌ಬುಕ್‌ನಲ್ಲಿ ಕಮೆಂಟ್ ಮಾಡಿದ್ದ ಕಾಂಗ್ರೆಸ್ ನಾಯಕ ವಿವೇಕ ಶೆಟ್ಟಿ ಮನೆಗೆ ನುಗ್ಗಿ ಮಹಿಳೆ ಮಕ್ಕಳು ಎನ್ನುವುದನ್ನು ನೋಡದೆ ಅಟ್ಟಹಾಸ ಮೆರೆದಿದ್ದು, ಈ ಭೀಭತ್ಸ ಕೃತ್ಯದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು.
 
ಶಾಸಕ ರಾಜು ಕಾಗೆ ಪುತ್ರಿ ಪ್ರತೀಕ್ಷಾ ಜೊತೆಗೆ 11 ಜನರ ರೌಡಿ ತಂಡ ಏಕಾಏಕಿ ಕಾಂಗ್ರೆಸ್ ನಾಯಕ ವಿವೇಕ ಶೆಟ್ಟಿ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ. ವಿವೇಕ ಶೆಟ್ಟಿಯನ್ನು ಗ್ರಾಮಸ್ಥರ ಎದುರೇ ರಸ್ತೆಗೆ ಎಳೆತಂದು ಕತ್ತು ಹಿಸುಕಿ ಕೊಲೆ ಮಾಡಲು ಸಹ ಯತ್ನಿಸಿದ್ದ ದೃಶ್ಯಗಳು ಸಹ ಸಿಸಿಟಿವಿಯಲ್ಲಿ ಸೆರೆಯಾಗಿದ್ದವು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ತಮಗಿಷ್ಟ ಬಂದಾಗ ಚಿನ್ನಮ್ಮ ತಮಿಳುನಾಡು ಸಿಎಂ !