Select Your Language

Notifications

webdunia
webdunia
webdunia
Friday, 11 April 2025
webdunia

`ನಾನು ಕನಕಪುರದ ಬಂಡೆ, ತಲೆ ಚಚ್ಚಿಕೊಂಡ್ರೆ ತಲೆಗೆ ಪೆಟ್ಟಾಗೋದು’: ಡಿಕೆಶಿ

IT
ಬೆಂಗಳೂರು , ಮಂಗಳವಾರ, 7 ನವೆಂಬರ್ 2017 (11:32 IST)
ಬೆಂಗಳೂರು: ಇವತ್ತು ಆದಾಯ ತೆರಿಗೆ ಇಲಾಖೆ ವಿಚಾರಣೆಗೆ ಹೋಗುವುದಿಲ್ಲ. ಅಧಿಕಾರಿಗಳೇ ಬೇಡ ಎಂದಿದ್ದಾರೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಸುದ್ದಿ ಮಾಧ್ಯಮಗಳಲ್ಲಿ ಬರುತ್ತಿರುವಂತೆ ಇಡಿ ತನಿಖೆ, ಸಿಬಿಐನಿಂದ ಆಸ್ತಿ ಮುಟ್ಟುಗೋಲು ಯಾವುದೂ ಇಲ್ಲ. ನಾನು ಕನಕಪುರದ ಬಂಡೆ ಇದ್ದಂತೆ. ತಲೆ ಚಚ್ಚಿಕೊಂಡ್ರೆ ತಲೆಗೆ ಪೆಟ್ಟಾಗೋದು ಹೊರತು ಬಂಡೆಗಲ್ಲ ಎಂದು ಬಿಜೆಪಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಇನ್ನು ನೋಟು ಅಮಾನ್ಯೀಕರಣಕ್ಕೆ ಒಂದು ವರ್ಷವಾದ ಹಿನ್ನೆಲೆಯಲ್ಲಿ ನೋಟು ರದ್ದಿನಿಂದ ದೇಶ ಬಡವಾಗಿದೆ. ಸಾವಿರಾರು ಜನ ಕೆಲಸ ಕಳೆದುಕೊಂಡಿದ್ದು, ನೂರಾರು ಜನ ಸತ್ತಿದ್ದಾರೆ. ಮದುವೆ ವೆಚ್ಚಕ್ಕೂ ಕಡಿವಾಣ ಹಾಕಲಾಗಿದೆ. ಮಹಿಳೆಯರು ಚಿನ್ನ ಕೊಳ್ಳುವುದಕ್ಕೂ ಅಡ್ಡಿಯಾಯ್ತು. ನಿಜಕ್ಕೂ ಇದು ಕರಾಳ. ನಾಳೆ ಕಾಂಗ್ರೆಸ್ ನಿಂದಲೂ ನೋಟು ರದ್ದು ಖಂಡಿಸಿ ಪ್ರತಿಭಟನೆ ನಡೆಸಲಾಗುವುದು ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ನನ್ನ ಫೋನ್ ಟ್ಯಾಪ್ ಆಗುತ್ತಿದೆ, ಯಾವುದಕ್ಕೂ ತಲೆ ಕೆಡಿಸಿಕೊಳ್ಳಲ್ಲ: ಡಿಕೆಶಿ