Webdunia - Bharat's app for daily news and videos

Install App

ಪರಮೇಶ್ವರ್ ಬಾಯಲ್ಲಿನ ಆ ಮಾತನ್ನು ನಾನು ನಿರೀಕ್ಷಿಸಿಯೇ ಇರಲಿಲ್ಲ: ದೇವೇಗೌಡ

Webdunia
ಗುರುವಾರ, 5 ಮಾರ್ಚ್ 2015 (19:00 IST)
ಪರಮೇಶ್ವರ್ ಅವರ ಬಾಯಲ್ಲಿ ಇಂತಹ ಮಾತು ಬರುತ್ತದೆ ಎಂದು ನಾನು ನಿರೀಕ್ಷಿಸಿಯೇ ಇರಲಿಲ್ಲ ಎನ್ನುವ ಮೂಲಕ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ತಿರುಗೇಟು ನೀಡಿದ್ದಾರೆ. 
 
ನಗರದ ತಮ್ಮ ಪದ್ಮನಾಭನಗರದ ನಿವಾಸದಲ್ಲಿ ಮಾತನಾಡಿದ ಅವರು, ನಾನು ವಾಮಾಚಾರದಂತಹ ಕೃತ್ಯಗಳನ್ನು ಎಸಗುವವನಲ್ಲ. ನನ್ನ ಗುಣಗಳನ್ನು ನೋಡಿದರೆ ಸಾಕು ನನ್ನ ಬಗ್ಗೆ ತಿಳಿಯುತ್ತದೆ. ಆದರೆ ಪರಮೇಶ್ವರ್ ಅವರು ಮುಂದಿನ ದಿನಗಳಲ್ಲಿ ಹೋಮ ಮಾಡಿಸುತ್ತೇವೆ ಎಂದು ಹೇಳುತ್ತಾರೆ ಎಂದು ನಾನು ನಿರೀಕ್ಷಿಸಿರಲಿಲ್ಲ. ಅದು ಅವರ ಘನತೆಗೆ ತಕ್ಕದ್ದಲ್ಲ. ಬೇಕಿದ್ದರೆ ಸಿಎಂ ಸಿದ್ದರಾಮಯ್ಯನವರನ್ನೂ ಕರೆದು ಜೊತೆಯಲ್ಲಿಯೇ ಹೋಮ ಮಾಡಲಿ. ಏಕೆಂದರೆ ಅವರೂ ಕೂಡ ಅದೇ ಕಚೇರಿಯಲ್ಲಿದ್ದವರು ಎಂದು ಬೇಸರವ್ಯಕ್ತಪಡಿಸಿದರು. 
 
ಡಾ.ಜಿ.ಪರಮೇಶ್ವರ್ ಅವರು ಈ ಹಿಂದೆ ಜೆಡಿಎಸ್ ನಮ್ಮ ಪಕ್ಷಕ್ಕೆ ಬಿಟ್ಟುಕೊಟ್ಟಿದ್ದ ಪಕ್ಷದ ಕಚೇರಿಯನ್ನು ಸ್ವಚ್ಛಗೊಳಿಸಲೆಂದು ನಮ್ಮ ಕಾರ್ಯಕರ್ತರು ತೆರಳಿದ್ದರು. ಆ ಸಂಧರ್ಭದಲ್ಲಿ ಎಲ್ಲಿ ಮುಟ್ಟಿದರೂ ಕೂಡ ನಿಂಬೆಹಣ್ಣು ಹಾಗೂ ಮಂತ್ರದ ಬಟ್ಟೆ ಸಿಗುತ್ತಿತ್ತು ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ನಾವೂ ಕೂಡ ಹೋಮ, ಹವನಗಳನ್ನು ಹಮ್ಮಿಕೊಳ್ಳಲಿದ್ದೇವೆ ಎಂದಿದ್ದಾರಲ್ಲ. ಅದಕ್ಕೆ ನಿಮ್ಮ ಅಭಿಪ್ರಾಯವೇನು ಎಂದು ಮಾಧ್ಯಮಗಲು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೌಡರು, ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments