Webdunia - Bharat's app for daily news and videos

Install App

ಅನುಪಮಾ ಶೆಣೈ ರಾಜೀನಾಮೆ ವಿಚಾರ ಗೊತ್ತಿಲ್ಲ ಎಂದ ಸಿಎಂ

Webdunia
ಭಾನುವಾರ, 5 ಜೂನ್ 2016 (16:11 IST)
ದಕ್ಷ ಪೊಲೀಸ್ ಅಧಿಕಾರಿ ಅನುಪಮಾ ಶೆಣೈ ಅವರ ರಾಜೀನಾಮೆ ವಿಚಾರ ನನಗೆ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಬೆಂಗಳೂರಿನಲ್ಲಿ ಮಾತನಾಡುತ್ತಿದ್ದ ಅವರು ಡಿವೈಎಸ್‌ಪಿ ಅನುಪಮಾ ಫೇಸ್ಬು‌ಕ್‌ನಲ್ಲಿ ಏನು ಬರೆದುಕೊಂಡಿದ್ದಾರೆ ಎಂಬುದು ನನಗೆ ತಿಳಿದಿಲ್ಲ. 'ಸಿದ್ದರಾಮಯ್ಯನವರ್ ರಮ್ ರಾಜ್ಯ' ಎಂಬ  ಪೋಸ್ಟ್ ಹಂಚಿಕೊಂಡಿರುವುದು ನನಗೆ ಗೊತ್ತಿಲ್ಲ .ಅದನ್ನು ನಾನು ನೋಡಿಲ್ಲ. ಹೀಗಾಗಿ ಅದಕ್ಕೆ ಉತ್ತರ ಕೊಡುವುದಕ್ಕೆ ಆಗುವುದಿಲ್ಲ ಎಂದಿದ್ದಾರೆ.
 
ದಕ್ಷ, ಪ್ರಾಮಾಣಿಕ, ಕೆಚ್ಚೆದೆಯ ಅಧಿಕಾರಿ ಎಂದೇ ಖ್ಯಾತಿಯಾಗಿರುವ ಅನುಪಮಾ ಶೆಣೈ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ಬಂದಿದ್ದಾರೆ. ಆದರೆ, ಅವರ ರಾಜೀನಾಮೆಗೆ ಸ್ಪಷ್ಟ ಕಾರಣವೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಇವುಗಳ ನಡುವೆಯೇ ಅವರದೆನ್ನಲಾದ ಫೇಸ್‌ಬುಕ್ ಖಾತೆಯಲ್ಲಿ `ಲಿಕ್ಕರ್ ಲಾಬಿಗೆ ಕೂಡ್ಲಗಿ ಜನತೆ ಶರಣು ಶರಣು ಎನ್ನಿರೇ' ಎನ್ನುವ ಸ್ಟೇಟಸ್ ಹರಿದಾಡುತ್ತಿದ್ದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಅಲ್ಲದೇ, `ಸಿದ್ದರಾಮಯ್ಯರ 'ರಮ್' ರಾಜ್ಯ- ಎಂದು ವ್ಯಕ್ತಿಯೊಬ್ಬರು ಹಾಕಿರುವ ಪೋಸ್ಟನ್ನು, ಅನುಪಮಾ ಅವರು ತಮ್ಮ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.
 
ಜೊತೆಗೆ, ಭಾನುವಾರ 1.20ಕ್ಕೆ ಅನುಪಮಾ ಅವರು ತಮ್ಮ ಪ್ರೊಫೈಲ್ ಫೋಟೋ ಬದಲಿಸಿ, ಕ್ರಾಂತಿಕಾರಿ ಸಂದೇಶ(ಅನ್ಯಾಯ ಅನ್ನೋದು ಕಾನೂನಾದಾಗ ಬಂಡಾಯ ಅನ್ನೋದು ಕರ್ತವ್ಯವಾಗುತ್ತದೆ )ವಿರುವ ಸ್ಲೋಗನ್ ಹಾಕಿದ್ದಾರೆ. ಕ್ಷಣಕ್ಷಣಕ್ಕೂ ಅವರ ರಾಜೀನಾಮೆ ಪ್ರಕರಣ ಹೊಸತೊಂದು ಕುತೂಹಲಕ್ಕೆ ಎಡೆಮಾಡಿಕೊಡುತ್ತಿದೆ. ಆದರೆ ಅನುಪಮಾ ಅವರು ಎಲ್ಲಿದ್ದಾರೆ ಎಂಬ ಬಗ್ಗೆ ಮಾತ್ರ ಯಾರಿಗೂ ತಿಳಿದಿಲ್ಲ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭೀಕರ ಭೂಕುಸಿತವಾಗಿದ್ದ ವಯನಾಡಿನಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ

ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿದ ಮಗ: ಮನನೊಂದು ದಂಪತಿ ಆತ್ಮಹತ್ಯೆ

ಕೆಆರ್‌ಎಸ್‌ ಉದ್ಯಾನವನದಲ್ಲಿ ಕಾವೇರಿ ಆರತಿಗೆ ರಾಜ್ಯ ಸರ್ಕಾರ ಚಿಂತನೆ

CBSE ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೊಸ ಪದ್ಧತಿ: ಮುಂದಿನ ವರ್ಷದಿಂದಲೇ ಜಾರಿಗೆ

ಸಂವಿಧಾನಕ್ಕೆ ಏನಾದ್ರೂ ಅಪಾಯವಿದ್ರೆ ಅದು ನಿಮ್ಮಿಂದಲೇ ಮಿಸ್ಟರ್ ಮೋದಿ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments