Webdunia - Bharat's app for daily news and videos

Install App

ನನಗೆ ಅರಮನೆ ಬೇಡ, ಜನರ ನಡುವೆ ಇರುತ್ತೇನೆ: ಯದುವೀರ್ ಒಡೆಯರ್

Krishnaveni K
ಸೋಮವಾರ, 18 ಮಾರ್ಚ್ 2024 (14:01 IST)
ಬೆಂಗಳೂರು: ಮೈಸೂರಿನಲ್ಲಿ ಈ ಬಾರಿ ಬಿಜೆಪಿಯಿಂದ ಕಣಕ್ಕಿಳಿಯುತ್ತಿರುವ ರಾಜವಂಶಸ್ಥ ಯದುವೀರ್ ಒಡೆಯರ್ ಜನರ ನಡುವೆಯೇ ಇದ್ದು ಕೆಲಸ ಮಾಡುವುದಾಗಿ ಹೇಳಿದ್ದಾರೆ.

ರಾಜಮನೆತನದವರು ಎಸಿ ರೂಂ ಬಿಟ್ಟು ಜನರ ನಡುವೆ ಕೆಲಸ ಮಾಡಲಿ ಎಂದು ಟೀಕೆಗಳು ಬಂದ ಬೆನ್ನಲ್ಲೇ ಯದುವೀರ್ ಒಡೆಯರ್ ಈ ಹೇಳಿಕೆ ನೀಡಿದ್ದಾರೆ. ನನ್ನನ್ನು ಸಂಪರ್ಕಿಸಲು ನೀವು ಅರಮನೆಗೆ ಬರಬೇಕಾಗಿಲ್ಲ. ನಾನೇ ನಿಮ್ಮ ಬಳಿಗೆ ಬರುತ್ತೇನೆ ಎಂದು ಯದುವೀರ್ ಒಡೆಯರ್ ಹೇಳಿದ್ದಾರೆ.

ನನಗೆ ಎಲ್ಲ ಪಕ್ಷದವರೊಂದಿಗೆ ಸಂಪರ್ಕವಿದೆ. ನನ್ನ ಪರಿಕಲ್ಪನೆ ಬಿಜೆಪಿಯೊಂದಿಗೆ ಹೊಂದಾಣಿಕೆಯಾಗುತ್ತದೆ. ಅದೇ ಕಾರಣಕ್ಕೆ ನಾನು ಬಿಜೆಪಿಯೊಂದಿಗೆ ಕೈ ಜೋಡಿಸುತ್ತಿದ್ದೇನೆ. ಜನರಿಗೂ ಅರಮನೆ ಜೊತೆ ವಿಶೇಷ ನಂಟಿದೆ ಎಂದು ಯದುವೀರ್ ಒಡೆಯರ್ ಹೇಳಿದ್ದಾರೆ.

ನನ್ನ ತಾಯಿ ಪ್ರಮೋದಾ ದೇವಿ ಒಡೆಯರ್ ಆಶೀರ್ವಾದ ನನ್ನ ಮೇಲಿದೆ. ಅವರ ಸಹಕಾರ ನನ್ನ ಜೊತೆಗಿರುತ್ತದೆ. ನನ್ನ ಪರವಾಗಿ ತಾಯಿ ಪ್ರಚಾರಕ್ಕೆ ಬರುವ ಅಗತ್ಯವಿಲ್ಲ ಎಂದಿದ್ದಾರೆ. ಯದುವೀರ್ ಈಗಾಗಲೇ ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿರುಸಿನಿಂದ ಪ್ರಚಾರ ಕೆಲಸ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments