ನನಗೆ ಅರಮನೆ ಬೇಡ, ಜನರ ನಡುವೆ ಇರುತ್ತೇನೆ: ಯದುವೀರ್ ಒಡೆಯರ್

Krishnaveni K
ಸೋಮವಾರ, 18 ಮಾರ್ಚ್ 2024 (14:01 IST)
ಬೆಂಗಳೂರು: ಮೈಸೂರಿನಲ್ಲಿ ಈ ಬಾರಿ ಬಿಜೆಪಿಯಿಂದ ಕಣಕ್ಕಿಳಿಯುತ್ತಿರುವ ರಾಜವಂಶಸ್ಥ ಯದುವೀರ್ ಒಡೆಯರ್ ಜನರ ನಡುವೆಯೇ ಇದ್ದು ಕೆಲಸ ಮಾಡುವುದಾಗಿ ಹೇಳಿದ್ದಾರೆ.

ರಾಜಮನೆತನದವರು ಎಸಿ ರೂಂ ಬಿಟ್ಟು ಜನರ ನಡುವೆ ಕೆಲಸ ಮಾಡಲಿ ಎಂದು ಟೀಕೆಗಳು ಬಂದ ಬೆನ್ನಲ್ಲೇ ಯದುವೀರ್ ಒಡೆಯರ್ ಈ ಹೇಳಿಕೆ ನೀಡಿದ್ದಾರೆ. ನನ್ನನ್ನು ಸಂಪರ್ಕಿಸಲು ನೀವು ಅರಮನೆಗೆ ಬರಬೇಕಾಗಿಲ್ಲ. ನಾನೇ ನಿಮ್ಮ ಬಳಿಗೆ ಬರುತ್ತೇನೆ ಎಂದು ಯದುವೀರ್ ಒಡೆಯರ್ ಹೇಳಿದ್ದಾರೆ.

ನನಗೆ ಎಲ್ಲ ಪಕ್ಷದವರೊಂದಿಗೆ ಸಂಪರ್ಕವಿದೆ. ನನ್ನ ಪರಿಕಲ್ಪನೆ ಬಿಜೆಪಿಯೊಂದಿಗೆ ಹೊಂದಾಣಿಕೆಯಾಗುತ್ತದೆ. ಅದೇ ಕಾರಣಕ್ಕೆ ನಾನು ಬಿಜೆಪಿಯೊಂದಿಗೆ ಕೈ ಜೋಡಿಸುತ್ತಿದ್ದೇನೆ. ಜನರಿಗೂ ಅರಮನೆ ಜೊತೆ ವಿಶೇಷ ನಂಟಿದೆ ಎಂದು ಯದುವೀರ್ ಒಡೆಯರ್ ಹೇಳಿದ್ದಾರೆ.

ನನ್ನ ತಾಯಿ ಪ್ರಮೋದಾ ದೇವಿ ಒಡೆಯರ್ ಆಶೀರ್ವಾದ ನನ್ನ ಮೇಲಿದೆ. ಅವರ ಸಹಕಾರ ನನ್ನ ಜೊತೆಗಿರುತ್ತದೆ. ನನ್ನ ಪರವಾಗಿ ತಾಯಿ ಪ್ರಚಾರಕ್ಕೆ ಬರುವ ಅಗತ್ಯವಿಲ್ಲ ಎಂದಿದ್ದಾರೆ. ಯದುವೀರ್ ಈಗಾಗಲೇ ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿರುಸಿನಿಂದ ಪ್ರಚಾರ ಕೆಲಸ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

Karnataka Weather: ಸೈಕ್ಲೋನ್ ಇಫೆಕ್ಟ್, ಕರ್ನಾಟಕದಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ಮುಂದಿನ ಸುದ್ದಿ
Show comments