Select Your Language

Notifications

webdunia
webdunia
webdunia
webdunia

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Sampriya

ಬೆಂಗಳೂರು , ಶನಿವಾರ, 7 ಜೂನ್ 2025 (19:04 IST)
ಬೆಂಗಳೂರು:  ನಾನು ಮಾಡುವ ಸಾಧನೆಗೆ ಹೆಸರು ಬೇಡ. ನಿಮ್ಮ ಹೃದಯದಲ್ಲಿ ಕೊಟ್ಟ ಸ್ಥಾನವೇ ನನಗೆ ದೊಡ್ಡದು. ನಾನು ಸಾಯುವ ಮುನ್ನ ನಿಮ್ಮ ಋಣ ತೀರಿಸಿ ಹೋಗುವೆ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. 

ಅವರು ಇಂದು ಮೈಷುಗರ್ ಶಾಲೆಯ ಕಾರ್ಯಕ್ರಮದಲ್ಲಿ ಮಾತನಾಡಿ, ಸಾವಿಗೂ ಮುನ್ನಾ ನಿಮ್ಮ ಋಣವನ್ನು ತೀರಿಸುತ್ತೇನೆ. ನನ್ನ ಸಾಧನೆಗಿಂತ ನಿಮ್ಮ ಪ್ರೀತಿ ಮುಖ್ಯವೆಂದರು. 

ಮಂಡ್ಯದಲ್ಲಿ ಇತ್ತೀಚೆಗೆ ನಡೆದ ಎರಡು ದುರ್ಘಟನೆಗಳ ಬಗ್ಗೆ ವಿಷಾದ ವ್ಯಕ್ತಪಡಿಸಿದರು. ಆಸ್ಪತ್ರೆಯಲ್ಲಿ ಬಾಲಕಿ ಸಾವು ಮತ್ತು ಟ್ರಾಫಿಕ್ ಪೊಲೀಸರ ತಪ್ಪಿನಿಂದ ಬಾಲಕಿ ಸಾವನ್ನಪ್ಪಿದ ಪ್ರಕರಣವನ್ನು ಅವರು ಉಲ್ಲೇಖಿಸಿದರು. 

ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಅವರು, ಪ್ರತಿಯೊಂದು ಜೀವವನ್ನು ದುಡ್ಡಿನಿಂದ ಅಳೆಯಲು ಸಾಧ್ಯವಿಲ್ಲ. ಇನ್ನಾದರೂ ಮಾನವನ ಜೀವಗಳಿಗೆ ಸರಿಯಾದ ಬೆಲೆ ಕೊಡಿ ಎಂದರು.

ನಾನು ಆಂಧ್ರದಲ್ಲಿ ಇತಿಹಾಸದ ಕಾರ್ಖಾನೆ ಉಳಿಸಿದೆ. ಹೆಚ್‌ಎಂಟಿ ಫ್ಯಾಕ್ಟರಿ ಉಳಿಸಲು ಪಣತೊಟ್ಟಿದ್ದೇನೆ. ಆದ್ರೆ, ಅದಕ್ಕೆ ರಾಜ್ಯ ಸರ್ಕಾರ ಭೂಮಿ ಕೊಡುತ್ತಿಲ್ಲ. ನನಗೆ ಮಂಡ್ಯ ಜನ ಸ್ವಲ್ಪ ಸಮಯ ಕೊಡಿ. ನನ್ನ ಮೇಲೆ ಜಿಲ್ಲೆಯ ಜನ ಸಾಕಷ್ಟು ನಿರೀಕ್ಷೆ ಇಟ್ಟಿದ್ದೀರಿ. ನನ್ನ ಒಂದು ಕಣ್ಣು, ಹೃದಯ ಇಲ್ಲೇ ಇರುತ್ತೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು