Webdunia - Bharat's app for daily news and videos

Install App

ರೈತ ಆತ್ಮಹತ್ಯೆಯ ಹಿಂದೆ ಪುತ್ರನ ಕೈವಾಡ ಆರೋಪ: ಮಾಹಿತಿ ಇಲ್ಲವೆಂದ ಡಿಜಿಪಿ ಓಂ ಪ್ರಕಾಶ್

Webdunia
ಮಂಗಳವಾರ, 23 ಆಗಸ್ಟ್ 2016 (10:44 IST)
ಮಾಗಡಿಯಲ್ಲಿ ತನ್ನ ಪುತ್ರನ ವಿರುದ್ಧ ಆರೋಪ ಮಾಡಿ ರೈತರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಕುರಿತ ತನಗೆ ತಡವಾಗಿ ಮಾಹಿತಿ ಲಭ್ಯವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲವೆಂದು ಡಿಜಿಪಿ ಓಂ ಪ್ರಕಾಶ್ ಸ್ಪಷ್ಟಪಡಿಸಿದ್ದಾರೆ.
 
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಪುತ್ರ ಕಾರ್ತಿಕೇಶ್ 15 ದಿನಗಳಿಂದ ವಿದೇಶದಲ್ಲಿದ್ದಾನೆ. ಪ್ರಕರಣದ ಕುರಿತು ರಾಮನಗರ ಎಸ್‌ಪಿ ಅವರ ಬಳಿ ಮಾಹಿತಿ ಪಡೆದುಕೊಳ್ಳುತ್ತೇನೆ. ಈ ಕುರಿತು ತಮಗೇನೂ ಗೊತ್ತಿಲ್ಲವೆಂದು ತಿಳಿಸಿದರು.
 
ರೈತ ಶಿವಣ್ಣನ ಕುಟುಂಬದಲ್ಲಿ ಆಸ್ತಿ ಕಲಹ ಉಂಟಾಗಿತ್ತು. ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಪ್ರಕರಣದಲ್ಲಿ ಶಿವಣ್ಣನ ವಿರುದ್ಧ ಅಂದರೆ ಆತನ ಸಹೋದರರಾದ ಲೋಕೇಶ್ ಮತ್ತು ನಾರಾಯಣಪ್ಪ ಪರವಾಗಿ ಆಗುವಂತೆ ಡಿಜಿಪಿ ಓಂ ಪ್ರಕಾಶ್  ಪುತ್ರ ಕಾರ್ತೀಕೇಶ್ ಲಾಬಿ ನಡೆಸಿದ್ದ ಎಂದು ಆರೋಪಿಸಲಾಗಿತ್ತು.
 
ವಿವಾದಿತ ಜಮೀನಿನಲ್ಲಿ ಕಾರ್ತಿಕೇಶ್ ಜಲ್ಲಿ ಕ್ರಷರ್ ವ್ಯವಹಾರ ನಡೆಸುತ್ತಿದ್ದರು. ಹೀಗಾಗಿ ತಮ್ಮ ತಂದೆಯ ಪ್ರಭಾವ ಬಳಸಿ ನನಗೆ ಆಸ್ತಿ ದೊರೆಯದಂತೆ ಮಾಡಿದ್ದಾರೆ. ನನ್ನ ಸಾವಿಗೆ ಡಿಜಿಪಿ ಪುತ್ರ ಕಾರ್ತಿಕೇಶ್ ಮತ್ತು ಕೆಲ ಅಧಿಕಾರಿಗಳು ಕಾರಣ ಎಂದು ಹೇಳಿ ವಿಡಿಯೋ ಮಾಡಿ ಶಿವಣ್ಣ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೂರು ದಿನದ ಹಿಂದೆ ವಿಷ ಕುಡಿದಿದ್ದ ಅವರು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments