Webdunia - Bharat's app for daily news and videos

Install App

ಸಿಎಂ ಯಾರಾಗ್ತಾರೋ ಯಾರಿಗೆ ಗೊತ್ತು: ಎಚ್.ಡಿ. ಕುಮಾರಸ್ವಾಮಿ

Webdunia
ಮಂಗಳವಾರ, 27 ಜುಲೈ 2021 (17:00 IST)
ಬಹಳಷ್ಟು ಮಂದಿ ಸಿಎಂ ರೇಸ್ ನಲ್ಲಿ ಇದ್ದಾರೆ. ಅಂತಿಮವಾಗಿ ಹೈಕಮಾಂಡ್ ಯಾರನ್ನ ಆಯ್ಕೆ ಮಾಡುತ್ತಾರೆ ಅಂತಾ ಗೊತ್ತಿಲ್ಲ‌ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ರಾಮನಗರದಲ್ಲಿ ನಾಡ ದೇವತೆ ಚಾಮುಂಡೇಶ್ವರಿ ಕರಗ ಮಹೋತ್ಸವ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿಗೆ ದಂಪತಿ ಸಮೇತ ವಿಶೇಷ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿ ಕಳೆದ ಎರಡು ದಿನಗಳಿಂದ ಯಾರು ಸಿಎಂ ಎಂದು ಭಾರಿ ಚರ್ಚೆ ನಡೆಯುತ್ತಿದೆ. ನರೇಂದ್ರ ಮೋದಿ ಅವರು ರಾಜ್ಯದ ಎಲ್ಲ ಮಾಹಿತಿ ಕಲೆ ಹಾಕಿದ್ದಾರೆ. ಕಳೆದ ಸರ್ಕಾರದ ನ್ಯೂನತೆ, ಒಳ್ಳೆಯ ಕೆಲಸಗಳನ್ನ ಬಗ್ಗೆ ಮಾಹಿತಿ ತೆಗೆದುಕೊಳ್ಳಲಿದ್ದಾರೆ. ಅವರ ಪಕ್ಷದ ಬಗ್ಗೆ ಅವರು ತೀರ್ಮಾನ ಮಾಡುತ್ತಾರೆ ಎಂದರು.
ಕಾಂಗ್ರೆಸ್ ನವರು ಒಂದು ಸಮಾಜವನ್ನ ಒಲೈಸಿಕೊಳ್ಳುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಸಿಎಂ ಯಾರು ಅಂತಾ ಟವಲ್ ಹಾಸಿ‌ ಕುಳಿತಿದ್ದರಲ್ಲ, ಅವರೇ ಹೇಳಿದ್ದಾರೆ ಈಗಿದ್ದ ಸಿಎಂ ಭ್ರಷ್ಟರು ಅಂತಾ, ಮುಂದೆ ಬರುವವರು ಹಾಗೇ ಅಂತಾ ಹೇಳಿದ್ದಾರೆ ಕಾಂಗ್ರೆಸ್ ಪಾರ್ಟಿ ರಾಜಕೀಯದ ಕುತಂತ್ರ ನಡೆಯನ್ನ ಅನುಸರಿಸುತ್ತಿದೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ದ ಮಾತನಾಡಿದರು.
ನಾನು ಎರಡು ಬಾರಿ ಸಿಎಂ ಆಗಿದ್ದು ಅದೃಷ್ಟದಲ್ಲೆ‌. ನಾನು ಎರಡು ಬಾರಿ ಸಿಎಂ ಆಗಿದ್ದು ತಾಯಿಯ ಚಾಮುಂಡೇಶ್ವರಿ ಅನುಗ್ರಹದಿಂದ. ಆರುವರೆ ಕೋಟಿ ಜನರ ಸಂಪೂರ್ಣ ಬಹುಮತದಿಂದ ನೀಡಿ ನನಗೆ ಮುಖ್ಯಮಂತ್ರಿ ಆಗಿರಲಿಲ್ಲ‌. ಎರಡು ಬಾರಿ ಸಿಎಂ ಆಗಿ ಒಳ್ಳೆಯ ಕೆಲಸ ಮಾಡಿದ ತೃಪ್ತಿ ನನಗೆ ಇದೆ. ಬಹುಶಃ ಮುಂದಿನ‌ ದಿನಗಳಲ್ಲಿ ಪಕ್ಷ ಅಧಿಕಾರಕ್ಕೆ ಬರುತ್ತೆ. ನಮ್ಮ ಪಕ್ಷ ಮುಗಿದೇ ಹೋಯಿತು ಎಂಬುವವರಿಗೆ ತಾಯಿಯ ಆರ್ಶೀವಾದದಿಂದ ಅಧಿಕಾರಕ್ಕೆ ಮತ್ತೆ ಬರುತ್ತೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

ಮುಂದಿನ ಸುದ್ದಿ
Show comments