Select Your Language

Notifications

webdunia
webdunia
webdunia
webdunia

ಅಂಬರೀಶ್, ಎಸ್‌.ಎಂ.ಕೃಷ್ಣ ಬಿಜೆಪಿ ಸೇರ್ಪಡೆಯ ಮಾಹಿತಿಯಿಲ್ಲ: ಯಡಿಯೂರಪ್ಪ

ಅಂಬರೀಶ್, ಎಸ್‌.ಎಂ.ಕೃಷ್ಣ ಬಿಜೆಪಿ ಸೇರ್ಪಡೆಯ ಮಾಹಿತಿಯಿಲ್ಲ: ಯಡಿಯೂರಪ್ಪ
ಬಾಗಲಕೋಟೆ , ಶುಕ್ರವಾರ, 10 ಫೆಬ್ರವರಿ 2017 (17:04 IST)
ಹಿರಿಯ ನಟ ಮಾಜಿ ಸಚಿವ ಅಂಬರೀಶ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಬಗ್ಗೆ ಮಾಹಿತಿಯಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
 
  ಹಿರಿಯ ಮುಖಂಡ ಎಸ್‍ಎಂ ಕೃಷ್ಣ, ಶೀಘ್ರಧಲ್ಲಿಯೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಇದೀಗ ಯೂ-ಟರ್ನ್ ಹೊಡೆದಿದ್ದಾರೆ.
 
ಇಂದು ಬಾಗಲಕೋಟೆಯಲ್ಲಿ ಮಾತನಾಡಿದ ಬಿಎಸ್‍ವೈ, ಕೃಷ್ಣ ಮತ್ತು ಅಂಬರೀಶ್ ನನ್ನೊಂದಿಗೆ ಯಾವುದೇ ರೀತಿಯ ಚರ್ಚೆ ನಡೆಸಿಲ್ಲ. ಇಬ್ಬರು ನಾಯಕರು ಬಿಜೆಪಿ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇವೆ ಎಂದು ತಿಳಿಸಿದ್ದಾರೆ.  
 
ಬಿಜೆಪಿ ಸೇರ್ಪಡೆ ಬಗ್ಗೆ ಇನ್ನೂ ಅಧಿಕೃತವಾಗಿಲ್ಲ. ಅವರು ಯಾವಾಗ ತೀರ್ಮಾನ ತೆಗೆದುಕೊಳ್ತಾರೋ ಗೊತ್ತಿಲ್ಲ. ಕೃಷ್ಣರನ್ನು ನಾನಂತೂ ಭೇಟಿಯಾಗಿಲ್ಲ ಎಂದು ತಿಳಿಸಿದ್ದಾರೆ.
 
ಕೆ.ಎಸ್.ಈಶ್ವರಪ್ಪ ಮತ್ತು ನಾನು ಅಣ್ಣತಮ್ಮಂದಿರಂತಿದ್ದೇವೆ. ಇಬ್ಬರು ಒಟ್ಟಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ತರುವುದೇ ನಮ್ಮ ಗುರಿಯಾಗಿದೆ ಎಂದು ಬಿಜೆಪಿ ರಾಜ್ಯಾದ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ರಜಿನಿಕಾಂತ್ ರಾಜಕೀಯಕ್ಕೆ.. ಶೀಘ್ರವೇ ಹೊಸ ಪಕ್ಷ ಘೋಷಣೆ