Webdunia - Bharat's app for daily news and videos

Install App

ಜನರಿಂದ ಪೊರಕೆ ಏಟು ತಿನ್ನುತ್ತೇನೆ- ಡಿಕೆಶಿ ಸಿ.ಪಿ.ಯೋಗೀಶ್ವರಗೆ ತಿರುಗೇಟು

Webdunia
ಶುಕ್ರವಾರ, 5 ಜನವರಿ 2018 (08:49 IST)

ಜನರು ಯಾವಾಗ ಬೇಕಾದರೂ ಪೊರಕೆಯಿಂದ ಹೊಡೆಯಲಿ, ನಾನು ಪೊರಕೆ ಏಟು ತಿನ್ನುತ್ತೇನೆ. ಇದು ರಾಜಕೀಯ ಬದ್ಧತೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೀಶ್ವರ್ ಅವರಿಗೆ ತಿರುಗೇಟು ನೀಡಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಅವರು, ಮಹಿಳೆಯ ಕೈಯಲ್ಲಿ ಪೊರಕೆಯಿಂದ ಡಿ.ಕೆ.ಶಿವಕುಮಾರ ಅವರನ್ನು ಹೊಡೆಸುತ್ತೇನೆ ಎಂದು ಸಿ.ಪಿ.ಯೋಗೀಶ್ವರ್ ಅವರು ನೀಡಿದ್ದ ಹೇಳಿಕೆಗೆ, ಈ ರೀತಿ ಹೇಳಿದ್ದಾರೆ.

ಚನ್ನಪಟ್ಟಣದ ಜನತೆ ನನ್ನನ್ನು ನಾಲ್ಕು ಬಾರಿ ಗೆಲ್ಲಿಸಿದ್ದಾರೆ. ಅಲ್ಲಿಯ ಜನರೊಂದಿಗೆ ಉತ್ತಮ ಬಾಂಧವ್ಯವಿದೆ. ಹಾಗಾಗಿ ರಾಜಕೀಯವಾಗಿ ಮದುವೆಯಾಗಿದ್ದೇನೆ ಎಂದು ಹೇಳಿದ್ದೇನೆ. ಆದರೆ ಅವರ ಹಾಗೇ ಮದುವೆಯಲ್ಲ. ನನ್ನದು ರಾಜಕೀಯ ಬದ್ಧತೆ ಎಂದಿದ್ದಾರೆ.

ಚನ್ನಪಟ್ಟಣದಲ್ಲಿ ಸಾಮಾನ್ಯ ವ್ಯಕ್ತಿಯನ್ನು ಕಣಕ್ಕಿಳಿಸಿ ಡಿ.ಕೆ.ಶಿವಕುಮಾರ ಅವರ ವಿರುದ್ಧ ಗೆಲ್ಲಿಸುತ್ತೇನೆ. ಸ್ಪರ್ಧೆ ಮಾಡಲಿ ಎಂದು ಸಿ.ಪಿ.ಯೋಗೀಶ್ವರ್ ಹಾಕಿದ್ದ ಸವಾಲಿಗೆ ಪ್ರತಿಕ್ರಿಯೆ ನೀಡಿ, ಚನ್ನಪಟ್ಟಣದಲ್ಲಿ ಅವರು ಮೊದಲು ಗೆಲ್ಲಲಿ, ನಂತರ ನನ್ನ ವಿರುದ್ಧ ಸಾಮಾನ್ಯರನ್ನು ಕಣಕ್ಕಿಳಿಸಲಿ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments