Publish Date: Sun, 01 Oct 2023 (14:24 IST)
Updated Date: Sun, 01 Oct 2023 (14:32 IST)
ಶಾಮನೂರು ಶಿವಶಂಕರಪ್ಪ ವೀರಶೈವ ಸಮಾಜದ ರಾಷ್ಟ್ರೀಯ ಅಧ್ಯಕ್ಷರು ಅವರು ವ್ಯಕ್ತಪಡಿಸಿರುವ ಭಾವನೆಗಳಿಗೆ ನನ್ನ ಸಂಪೂರ್ಣ ಬೆಂಬಲ ಇದೆ.ವೀರಶೈವ ಸಮುದಾಯದವರು ಬಹಳ ದೊಡ್ಡ ಪ್ರಮಾಣದಲ್ಲಿ ಇದ್ದಾರೆ.ಆದ್ರೆ ಸಮುದಾಯದವರನ್ನು ಕಡೆಗಣಿಸಲಾಗ್ತಿದೆ.ಇದರ ಬಗ್ಗೆ ಶಾಮನೂರು ಅವರಿಗೆ ಕಳಕಳಿ ಇದೆ.ಹೀಗಾಗಿ ಎಲ್ಲ ವೀರಶೈವ ಸಮುದಾಯದ ಮುಖಂಡರಲ್ಲಿ ಇದೇ ತಳಮಳ ಇದೆ.ಹೀಗಾಗಿ ಅವರ ಹೇಳಿಕೆಯನ್ನು ನಾನು ಸಂಪೂರ್ಣ ಒಪ್ಪುತ್ತೇನೆ.ಈ ಸಮಯದಲ್ಲಿ ವೀರಶೈವ ಲಿಂಗಾಯತ ಸಮಾಜದವ್ರು ಜಾಗೃತ ಆಗಬೇಕು, ಒಂದಾಗಬೇಕು, ಒಟ್ಟಾಗಬೇಕು ಅನ್ನೋ ಕರೆಯನ್ನು ನಾನು ಸಹ ಕೊಡ್ತೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.