Publish Date: Fri, 29 May 2026 (20:06 IST)
Updated Date: Fri, 29 May 2026 (20:08 IST)
ಮೈಸೂರು: ಸಿದ್ದರಾಮಯ್ಯ ಅವರು ಸಿಎಂ ಸ್ಥಾನವನ್ನು ಗೌರಯುತವಾಗಿ ಬಿಟ್ಟುಕೊಟ್ಟಿದ್ದಾರೆ. ಹೀಗಾಗಿ, ಅವರನ್ನು ಈಗ ಟೀಕಿಸುವುದಿಲ್ಲ. ಮುಂದಿನ ಜೀವನ ಚೆನ್ನಾಗಿರಲೆಂದು ಹಾರೈಸುವೆ ಎಂದು ಮಾಜಿ ಸಂಸದ ಪ್ರತಾಪ ಸಿಂಹ ಹೇಳಿದರು.
ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಾನು ಇದೀಗ ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ಪ್ರಶ್ನೆ ಮಾಡುವುದಿಲ್ಲ. ಮುಂದಿನ ಸಿಎಂ ಆಗಲಿರುವ ಡಿ.ಕೆ. ಶಿವಕುಮಾರ್ ಅವರನ್ನೂ ಟೀಕಿಸುವುದಿಲ್ಲ. ಸಿದ್ದರಾಮಯ್ಯ ಅವರ ಆಡಳಿತದ ವಿಮರ್ಶೆಯನ್ನೂ ಮಾಡುವುದಿಲ್ಲ. ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ ಎಂದರು.
ಶಿವಕುಮಾರ್ ಕೂಡ ಒಳ್ಳೆಯ ಆಡಳಿತ ಕೊಟ್ಟ ಟೀಕೆಗಳಿಂದ ತಪ್ಪಿಸಿಕೊಳ್ಳಲಿ. ಅವರು ಕೆಟ್ಟ ಆಡಳಿತ ನೀಡಿದರೆ ಟೀಕೆಗಳು ಸಹಜವಾಗಿಯೇ ಬರುತ್ತವೆ. ಅವರ ನಡೆ–ನುಡಿ ಆಧರಿಸಿ ನಮ್ಮ ಮಾತುಗಳು ಬರುತ್ತವೆ ಎಂದು ಹೇಳಿದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ