Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯಗೆ ಮರು ಜನ್ಮ ಕೊಟ್ಟಿರುವುದೇ ನಾನು: ಶ್ರೀನಿವಾಸ್ ಪ್ರಸಾದ್

ಸಿಎಂ ಸಿದ್ದರಾಮಯ್ಯಗೆ ಮರು ಜನ್ಮ ಕೊಟ್ಟಿರುವುದೇ ನಾನು: ಶ್ರೀನಿವಾಸ್ ಪ್ರಸಾದ್
ಬೆಂಗಳೂರು , ಶುಕ್ರವಾರ, 1 ಜುಲೈ 2016 (12:27 IST)
ಸಿಎಂ ಸಿದ್ದರಾಮಯ್ಯಗೆ ರಾಜಕೀಯ ಮರು ಜನ್ಮ ಕೊಟ್ಟಿರುವುದೇ ನಾನು. ಅದನ್ನು ಧೈರ್ಯದಿಂದ ಹೇಳುತ್ತೇನೆ. ಆದರೆ ಅವರು ನನ್ನ ಮೇಲೆ ವಿಶ್ವಾಸ ದ್ರೋಹವೆಸಗಿದ್ದಾರೆ ಎಂದು ಕಾಂಗ್ರೆಸ್‌ನ ಬಂಡಾಯ ಶಾಸಕ ವಿ.ಶ್ರೀನಿವಾಸ್ ಪ್ರಸಾದ್ ಗುಡುಗಿದ್ದಾರೆ
 
ಎಸ್.ಎಂ.ಕೃಷ್ಣರಿಗೆ ನಾಯಕತ್ವ ವಹಿಸಿಕೊಳ್ಳಿ ಎಂದು ಕೇಳುವುದಿಲ್ಲ. ದಿಗ್ವಿಜಯ್ ನಂತಹ ನಾಯಕರು ರಾಜ್ಯದ ಉಸ್ತುವಾರಿ ವಹಿಸಿಕೊಂಡಲ್ಲಿ  ಕಾಂಗ್ರೆಸ್ ಪಕ್ಷ ಮುಳುಗಿ ಹೋಗುತ್ತದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿಗೆ ಪರೋಕ್ಷ ಟಾಂಗ್
 
ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಜೊತೆ ಮೂರು ವರ್ಷಗಳ ಅವಧಿಯಲ್ಲಿ ಒಂದು ದಿನವಾದರೂ ಅಭಿವೃದ್ಧಿಯ ಬಗ್ಗೆ ಚರ್ಚಿಸಿಲ್ಲ. ಅವರು ಕೇವಲ ತಮ್ಮ ಚೇಲಾಗಳ ಸಲಹೆಗಳನ್ನು ಕೇಳುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಕಾಂಗ್ರೆಸ್ ಪಕ್ಷದ ಮೂವರು ನಾಯಕರಿಂದ ಸಂಪುಟ ಪುನಾರಚನೆ ನಡೆದಿದೆ, ಸಿಎಂ ಸಿದ್ದರಾಮಯ್ಯ ದಿಗ್ವಿಜಯ್ ಸಿಂಗ್ ಮತ್ತು ಮಲ್ಲಿಕಾರ್ಜುನ್ ಖರ್ಗೆ ಸಂಪುಟ ಪುನಾರಚನೆಯ ರೂವಾರಿಗಳಾಗಿದ್ದಾರೆ ಎಂದು  ಕಾಂಗ್ರೆಸ್ ಪಕ್ಷದ ಬಂಡಾಯ ಶಾಸಕ ವಿ.ಶ್ರೀನಿವಾಸ್ ಪ್ರಸಾದ್ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಒಬ್ಬ ಸನ್ಯಾಸಿ, ನರೇಂದ್ರ ಮೋದಿ ಜೀವನವನ್ನೇ ಬದಲಿಸಿದ!