Select Your Language

Notifications

webdunia
webdunia
webdunia
webdunia

ಸಿಎಂ ಯಡಿಯೂರಪ್ಪ ಅವರಿಂದ ನನಗೆ ಜೀವಬೆದರಿಕೆ ಇದೆ- ಶರಣ್ ಗೌಡ ಗಂಭೀರ ಆರೋಪ

ಸಿಎಂ ಯಡಿಯೂರಪ್ಪ ಅವರಿಂದ ನನಗೆ ಜೀವಬೆದರಿಕೆ ಇದೆ- ಶರಣ್ ಗೌಡ ಗಂಭೀರ ಆರೋಪ
ಯಾದಗಿರಿ , ಮಂಗಳವಾರ, 22 ಅಕ್ಟೋಬರ್ 2019 (10:34 IST)
ಯಾದಗಿರಿ : ಸಿಎಂ ಯಡಿಯೂರಪ್ಪ ಅವರಿಂದ ನನಗೆ ಜೀವಬೆದರಿಕೆ ಇದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ  ಮಹಾ ಪ್ರಧಾನ ಕಾರ್ಯದರ್ಶಿ ಶರಣ್ ಗೌಡ ಗಂಭೀರ ಆರೋಪ ಮಾಡಿದ್ದಾರೆ.



 


ಮಾಧ್ಯಮದವರೊಂದಿಗೆ  ಮಾತನಾಡಿದ ಅವರು, ಆಪರೇಷನ್ ಕಮಲ ಆಡಿಯೋ ಬಹಿರಂಗಪಡಿಸಿದ್ದಕ್ಕೆ ಸಿಎಂ ಯಡಿಯೂರಪ್ಪ ಅವರು ನನ್ನ ಮೇಲೆ ಹಗೆ ಸಾಧಿಸಿಕೊಳ್ಳುತ್ತಿದ್ದಾರೆ. ಅಲ್ಲದೇ ನನ್ನ ಮೇಲೆ ಸುಳ್ಳು ಕೇಸನ್ನು ದಾಖಲಿಸಲು ಪೊಲೀಸ್ ಅಧಿಕಾರಿಗಳನ್ನು ಬಳಸಿಕೊಂಡು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.


ನನ್ನ ಹಿಂದೆ ಅಪರಿಚಿತ  ವ್ಯಕ್ತಿಗಳನ್ನು ಬಿಟ್ಟಿದ್ದಾರೆ. ಮುಸುಕುಧಾರಿ ವ್ಯಕ್ತಿಗಳು ನನ್ನನ್ನು ಫಾಲೋ ಮಾಡುತ್ತಿದ್ದಾರೆ. ಅಲ್ಲದೇ ಇತ್ತೀಚೆಗೆ ನನ್ನ ಫೋನ್ ಕೂಡ ಟ್ಯಾಪ್ ಮಾಡಲಾಗಿದೆ ಎಂದು ಸಿಎಂ ಮೇಲೆ ಆರೋಪ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಎಡೆಬಿಡದೆ ಸುರಿಯುತ್ತಿರುವ ಮಳೆ; ರಾಜ್ಯದ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ