Webdunia - Bharat's app for daily news and videos

Install App

ಪೇಜಾವರ ಶ್ರೀಗಳು ದಲಿತರ ಪರವಾಗಿದ್ದಾರೆ, ಅವರ ಮೇಲೆ ಅಪಾರ ಗೌರವವಿದೆ: ಎಚ್‌.ಆಂಜನೇಯ

Webdunia
ಮಂಗಳವಾರ, 17 ಜನವರಿ 2017 (15:01 IST)
ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಮೇಲೆ ನನಗೆ ಅಪಾರ ಗೌರವ ಇದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್‌.ಆಂಜನೇಯ ತಿಳಿಸಿದರು.
 
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳು ದಲಿತರ ಪರವಾಗಿದ್ದಾರೆ. ಅವರು ದಲಿತ ಕೇರಿಗಳಿಗೆ ಹೋಗುತ್ತಾರೆ. ಸಾಮೂಹಿಕ ಭೋಜನದಲ್ಲಿಯೂ ಭಾಗಿಯಾಗುತ್ತಾರೆ. ಹೀಗಾಗಿ ನನಗೆ ಅವರ ಮೇಲೆ ಅಪಾರ ಗೌರವ ಇದೆ ಎಂದರು. 
 
ಇದರಿಂದಾಗಿಯೇ ನಾನು ಅವರ ಮಠಕ್ಕೆ ಹೋಗುತ್ತೇನೆ. ನಾನು ದೇವಸ್ಥಾನಗಳಿಗೆ ಹೋಗದೆ ಇದ್ದರೂ ಬಹುತೇಕ ಮಠಗಳಿಗೆ ಭೇಟಿ ನೀಡುತ್ತೇನೆ ಎಂದು ತಿಳಿಸಿದರು.
 
ದೇವಸ್ಥಾನದಲ್ಲಿ ದೇವರು ಮಾತನಾಡುವುದಿಲ್ಲ. ಆದರೆ, ಮಠಗಳಲ್ಲಿ ಸ್ವಾಮೀಜಿಗಳು ಮಾತನಾಡುತ್ತಾರೆ. ಹೀಗಾಗಿ ದೇವಸ್ಥಾನಗಳ ಬದಲಿಗೆ ಮಠಗಳಿಗೆ ಹೆಚ್ಚು ಭೇಟಿ ನೀಡುತ್ತೇನೆ. ಅದರಂತೆಯೇ ಉಡುಪಿಯ ಪೇಜಾವರ ಮಠಕ್ಕೆ ಭೇಟಿ ನೀಡಿ ಊಟ ಮಾಡಿ ಬಂದಿದ್ದೇನೆ ಎಂದು ಸಮಾಜ ಕಲ್ಯಾಣ ಸಚಿವ ಎಚ್‌.ಆಂಜನೇಯ ತಿಳಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments