Select Your Language

Notifications

webdunia
webdunia
webdunia
webdunia

ರಾಜಕೀಯದಿಂದ ಒಂದು ಎಕರೆ ಭೂಮಿ ಖರೀದಿಸಿಲ್ಲ: ದಿನೇಶ್ ಗುಂಡೂರಾವ್

ರಾಜಕೀಯದಿಂದ ಒಂದು ಎಕರೆ ಭೂಮಿ ಖರೀದಿಸಿಲ್ಲ: ದಿನೇಶ್ ಗುಂಡೂರಾವ್
ಬೆಂಗಳೂರು , ಶುಕ್ರವಾರ, 3 ಮಾರ್ಚ್ 2017 (13:23 IST)
ನನ್ನ ತಂದೆಯವರು ಜಮೀನು ಖರೀದಿಸಿದ್ದಾರೆ. ಜಮೀನು ವಿವಾದದ ಬಗ್ಗೆ ಈಗಾಗಲೇ ಲೋಕಾಯುಕ್ತ ತನಿಖೆಯಾಗಿದೆ. ನಾನು ಇಲ್ಲಿಯವರೆಗೆ ಒಂದು ಎಕರೆ ಭೂಮಿಯನ್ನು ಖರೀದಿಸಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡುರಾವ್ ಹೇಳಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗೋಮಾಳ ಜಮೀನು ಖರೀದಿಸಿದ್ದೇನೆ ಎಂದು ಆರೋಪಿಸಿ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಅವರು ದಾಖಲೆ ಬಿಡುಗಡೆ ಮಾಡಲಿ ಕಾದು ನೋಡೋಣ ಎಂದು ತಿರುಗೇಟು ನೀಡಿದ್ದಾರೆ.
 
ಲೆಹರ್‌ಸಿಂಗ್ ನಿವಾಸದಲ್ಲಿ ಪತ್ತೆಯಾದ ಡೈರಿಯಲ್ಲಿ ಯಡಿಯೂರಪ್ಪ ಮತ್ತು ಬಿಜೆಪಿ ಹೈಕಮಾಂಡ್‌ಗೆ ನೀಡಿದ ಹಣದ ಅವ್ಯವಹಾರ ಬಹಿರಂಗಪಡಿಸಿದ್ದರಿಂದ ಸೇಡಿನ ರಾಜಕೀಯದಿಂದ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಇಂತಹ ಆರೋಪಗಳು ಸತ್ಯಕ್ಕೆ ದೂರವಾಗಿವೆ ಎಂದು ಹೇಳಿದ್ದಾರೆ.
 
ರಾಜ್ಯದ ಜನತೆಗೆ ಭ್ರಷ್ಟರು ಯಾರು ಎನ್ನುವುದು ಗೊತ್ತಿದೆ. ಆದ್ದರಿಂದ, ನಾನು ಹೆಚ್ಚಿನ ವಿವರಣೆ ನೀಡಲು ಬಯಸುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಅಶ್ಲೀಲ ವಿಡಿಯೋ ವೈರಲ್: ಆತ್ಮಹತ್ಯೆಗೆ ಶರಣಾದ ಗೃಹಿಣಿ