Publish Date: Sun, 13 Mar 2022 (16:35 IST)
Updated Date: Sun, 13 Mar 2022 (16:37 IST)
ಸಿ.ಎಂ.ಇಬ್ರಾಹಿಂ ಅವರ ರಾಜೀನಾಮೆ ಪತ್ರ ನನಗೆ ತಲುಪಿಲ್ಲ. ಪತ್ರ ಬಂದ ಬಳಿಕ ಈ ಬಗ್ಗೆ ಮಾತನಾಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಶನಿವಾರ ಸಿ.ಎಂ ಇಬ್ರಾಹಿಂ ಹೇಳಿದ್ದರು.
ಸಿದ್ದರಾಮಯ್ಯ ಅವರಿಗೂ ರಾಜೀನಾಮೆ ಪತ್ರ ಕಳುಹಿಸಿದ್ದೇನೆ ಎಂದಿದ್ದರು. ಆದರೆ ಇನ್ನೂ ನನಗೆ ರಾಜೀನಾಮೆ ಪತ್ರ ಸಿಕ್ಕಿಲ್ಲ ಎಂದು ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಕೆಲ ವಾರಗಳ ಹಿಂದೆಯೇ ಸಿ.ಎಂ. ಇಬ್ರಾಹಿಂ ಹೇಳಿದ್ದರು. ಆದರೆ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹಲವು ಪ್ರಯತ್ನ ನಡೆಸಿದ್ದರು ಆದರೆ ಇದೀಗ ವಿಫಲವಾಗಿದೆ.