Webdunia - Bharat's app for daily news and videos

Install App

ನನಗೂ ಐಶ್ವರ್ಯಾ ಗೌಡಗೂ ಯಾವುದೇ ಸಂಬಂಧವಿಲ್ಲ: ಇಡಿ ಮುಂದೆ ಹಾಜರಾದ ಡಿಕೆ ಸುರೇಶ್‌

Sampriya
ಮಂಗಳವಾರ, 8 ಜುಲೈ 2025 (16:07 IST)
ಬೆಂಗಳೂರು: ಐಶ್ವರ್ಯಾ ಗೌಡ ಚಿನ್ನಾಭರಣ ವಂಚನೆ ಪ್ರಕರಣ ಸಂಬಂಧ ಕಾಂಗ್ರೆಸ್‌ನ ಮಾಜಿ ಸಂಸದ ಡಿಕೆ ಶಿವಕುಮಾರ್ ಅವರು ಇಂದು ಇಡಿ ಅಧಿಕಾರಿಗಳ ಮುಂದೆ ಹಾಜರಾದರು. 

ಜೂನ್‌ 17ರಂದು ಡಿ.ಕೆ.ಸುರೇಶ್ ಅವರ ಮನೆಗೆ ತೆರಳಿದ್ದ ಇ.ಡಿ ಅಧಿಕಾರಿಗಳು, ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರು. ನಗರದ ಶಾಂತಿನಗರದಲ್ಲಿರುವ ಇ.ಡಿ ಕಚೇರಿಗೆ ಮಂಗಳವಾರ ತೆರಳಿದ್ದ ಸುರೇಶ್‌ ಅವರು ವಿಚಾರಣೆಗೆ ಹಾಜರಾಗಿದ್ದರು.

ವಿಚಾರಣೆ ಬಳಿಕ ಮಾತನಾಡಿದ ಅವರು, ‘ಆಸ್ತಿಗೆ ಸಂಬಂಧಿಸಿದ ಮಾಹಿತಿ ಮತ್ತು ದಾಖಲೆಗಳನ್ನು ಅಧಿಕಾರಿಗಳು ಕೇಳಿದ್ದರು, ನೀಡಿದ್ದೇನೆ. ಅವರ ವಿಚಾರಣೆಗೆ ಸಹಕರಿಸಿದ್ದೇನೆ’ ಎಂದರು.

‘ನನಗೂ ಐಶ್ವರ್ಯಾ ಗೌಡಗೂ ಯಾವುದೇ ರೀತಿಯ ಸಂಬಂಧ ಇಲ್ಲ. ಹೀಗಿದ್ದೂ ಅವರ ವಂಚನೆ ಪ್ರಕರಣಕ್ಕೆ ನನ್ನನ್ನು ಹೇಗೆ ತಳಕು ಹಾಕುತ್ತಿದ್ದಾರೆ ಎಂಬುದು ಗೊತ್ತಾಗಿಲ್ಲ. ಅವರು ತನಿಖೆ ನಡೆಸುತ್ತಿದ್ದಾರೆ, ನಡೆಸಲಿ. ನಾನು ಸಂಪೂರ್ಣ ಸಹಕಾರ ನೀಡುತ್ತೇನೆ’ ಎಂದರು.

ಏನಿದು ಪ್ರಕರಣ: ಚಿನ್ನ ಮತ್ತು ಹಣ ಹೂಡಿಕೆಗೆ ದುಪ್ಪಟ್ಟು ಲಾಭ ಕೊಡಿಸುತ್ತೇನೆ ಎಂದು ಹೇಳಿ ಐಶ್ವರ್ಯಾ ಗೌಡ ಹೇಳಿ ಹಲವು ಚಿನ್ನಾಭರಣ ವ್ಯಾಪಾರಿಗಳಿಂದ ಚಿನ್ನ ಪಡೆದುಕೊಂಡಿದ್ದರು. ಆದರೆ ಹಣವನ್ನೂ ನೀಡಿಲ್ಲ, ಚಿನ್ನವನ್ನೂ ವಾಪಸ್‌ ಮಾಡಿಲ್ಲ ಎಂದು ಕೆಲ ಚಿನ್ನಾಭರಣ ವ್ಯಾಪಾರಿಗಳು ಪೊಲೀಸರಿಗೆ ದೂರು ನೀಡಿದ್ದರು. 

ಹಣ ವಾಪಸ್‌ ಕೇಳಿದಾಗ, ತಾನು ಡಿ.ಕೆ.ಸುರೇಶ್ ಅವರ ಸೋದರಿ ಎಂದು ಹೇಳಿ ಬೆದರಿಕೆ ಹಾಕಿದ್ದರು ಎಂದೂ ದೂರಿನಲ್ಲಿ ವಿವರಿಸಿದ್ದರು.

‘ನನ್ನ ಹೆಸರನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ’ ಎಂದು ಡಿ.ಕೆ.ಸುರೇಶ್‌ ಅವರು ಸಹ ಪೊಲೀಸರಿಗೆ ದೂರು ನೀಡಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, ಬಾಲಕಿ ಮೇಲೆ ಅತ್ಯಾಚಾರ: 20ವರ್ಷ ಜೈಲು

ಮೊದಲ ಹಂತದಲ್ಲೇ ರಾಜ್ಯದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭ: ಮಧು ಬಂಗಾರಪ್ಪ

ಏರ್‌ ಇಂಡಿಯಾ ವಿಮಾನ ಅಪಘಾತ: ಕೊನೆಗೂ ಪ್ರಾಥಮಿಕ ವರದಿ ಸಿದ್ದ, 2 ಪುಟಗಳ ವರದಿ ಸಲ್ಲಿಕೆ

ಹುಬ್ಬಳ್ಳಿ- ಧಾರವಾಡದ 65 ಪೊಲೀಸ್ ಅಧಿಕಾರಿಗಳಿಗೆ ಬೊಜ್ಜು ಕರಗಿಸುವ ಟ್ರೈನಿಂಗ್,4ರಿಂದ 11ಕೆಜಿ ಇಳಿಕೆ

ಗೋಣಿಕೊಪ್ಪಲು: ಕಾಡಾನೆ ದಾಳಿಗೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು, ಸೈಕಲ್‌ನಲ್ಲಿದ್ದವ ಪಾರಾಗಿದ್ದೆ ಪವಾಡ

ಮುಂದಿನ ಸುದ್ದಿ
Show comments