Webdunia - Bharat's app for daily news and videos

Install App

'ಆರ್ ಎಸ್ ಎಸ್ ನಿಂದ ನಾನು ಕಲಿಯುವುದು ಏನೂ ಇಲ್ಲ’: ಕುಮಾರಸ್ವಾಮಿ

Webdunia
ಬುಧವಾರ, 20 ಅಕ್ಟೋಬರ್ 2021 (14:04 IST)
ವಿಜಯಪುರ  : ಆರ್ ಎಸ್ ಎಸ್ ಶಾಖೆಯಿಂದ ತಮಗೆ ಕಲಿಯುವುದು ಏನೂ ಇಲ್ಲ, ಆರ್ ಎಸ್ ಎಸ್ ನಿಂದ ತರಬೇತಿ ಪಡೆದು ಬಂದವರು ವಿಧಾನಸೌಧದಲ್ಲಿ ಕಲಾಪ ನಡೆಯುವಾಗ ನೀಲಿ ಚಿತ್ರ ವೀಕ್ಷಣೆ ಮಾಡುತ್ತಿರುತ್ತಾರೆ ಎಂದು ಬಿಜೆಪಿ ನಾಯಕರಿಗೆ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಇತ್ತೀಚೆಗೆ ಕುಮಾರಸ್ವಾಮಿಯವರನ್ನು ಆರ್ ಎಸ್ ಎಸ್ ಶಾಖೆಗೆ ಬಂದು ಸಂಘದ ಚಟುವಟಿಕೆಗಳನ್ನು ಕಲಿಯುವಂತೆ ಆಹ್ವಾನ ನೀಡಿದ್ದರು.
ಅದಕ್ಕೆ ನಿನ್ನೆ ವಿಜಯಪುರದಲ್ಲಿ ಮಾತನಾಡುತ್ತಾ ಪ್ರತಿಕ್ರಿಯಿಸಿದ ಕುಮಾರಸ್ವಾಮಿಯವರು, ನನಗೆ ಅವರ ಸ್ನೇಹ ಬೇಡ. ಆರ್ ಎಸ್ ಎಸ್ ಶಾಖೆಯಲ್ಲಿ ಏನು ಹೇಳಿಕೊಡುತ್ತಾರೆ ಎಂದು ನನಗೆ ಗೊತ್ತಿಲ್ಲವೇ? ವಿಧಾನಸೌಧದಲ್ಲಿ ಹೇಗೆ ವರ್ತಿಸಬೇಕು, ಸದನದಲ್ಲಿ ಕಲಾಪ ನಡೆಯುವಾಗ ಬ್ಲೂ ಫಿಲ್ಮ್ ನೋಡುತ್ತಿರುತ್ತಾರೆ. ಆರ್ ಎಸ್ ಎಸ್ ಶಾಖೆಯಲ್ಲಿ ಅಂತದ್ದನ್ನು ಹೇಳಿಕೊಡುವುದಿಲ್ಲವೇ? ಅಂತಹ ಕೆಟ್ಟ ವಿಷಯಗಳನ್ನು ಕಲಿಯಲು ನಾನು ಆರ್ ಎಸ್ ಎಸ್ ಶಾಖೆಗೆ ಹೋಗಬೇಕೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಉಪ ಚುನಾವಣೆ ಪ್ರಚಾರದ ವೇಳೆ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ನನಗೆ ಬಿಜೆಪಿಯವರ ಆರ್ ಎಸ್ ಎಸ್ ಶಾಖೆ ಬೇಡ. ನಾನು ಇಲ್ಲಿ ಬಡಜನರ ಬಗ್ಗೆ ಕಲಿತ ಶಾಖೆ ಸಾಕು, ಅವರ ಆರ್ ಎಸ್ ಎಸ್ ಶಾಖೆಯಿಂದ ನಾನು ಕಲಿಯುವುದು ಏನೂ ಇಲ್ಲ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments