Publish Date: Sat, 02 Sep 2023 (17:00 IST)
Updated Date: Sat, 02 Sep 2023 (16:53 IST)
ಹಾಸನದಲ್ಲಿ ಆನೆ ದಾಳಿಗೆ ಶಾರ್ಪ್ ಶೂಟರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ವೀರನ ಹೊಸಹಳ್ಳಿಯಲ್ಲಿ ಮಾತನಾಡಿದ ಅವರು, ಪ್ರಕರಣದ ತನಿಖೆಗೆ ಆದೇಶ ನೀಡಿದ್ದೇನೆ. ಇದು ಬಹಳ ದೊಡ್ಡ ದುರಂತ ಆಗಿದೆ. ಅರಣ್ಯ ಇಲಾಖೆಗೆ ದೊಡ್ಡ ಹಾನಿಯಾಗಿದೆ. ಸರ್ಕಾರದ ವತಿಯಿಂದ ಕುಟುಂಬಕ್ಕೆ ಪರಿಹಾರ ನೀಡಲಾಗುವುದು. ಸರ್ಕಾರ ಕುಟುಂಬಸ್ಥರ ಪರವಾಗಿ ನಿಲ್ಲುತ್ತದೆ ಎಂದ್ರು.