Webdunia - Bharat's app for daily news and videos

Install App

ರಾಜ್ಯಕ್ಕೆ ಕೊಡುಗೆ ನೀಡಿಲ್ಲವೆಂಬ ಆರೋಪ ಶುದ್ಧ ಸುಳ್ಳು: ಆಸ್ಕರ್ ಫರ್ನಾಂಡಿಸ್

Webdunia
ಮಂಗಳವಾರ, 31 ಮೇ 2016 (16:11 IST)
ನಾನು ಕರ್ನಾಟಕ ರಾಜ್ಯಕ್ಕಾಗಿ ಯಾವುದೇ ಕೊಡುಗೆ ನೀಡಿಲ್ಲವೆಂಬ ಆರೋಪ ಶುದ್ಧ ಸುಳ್ಳು ಎಂದು ಕಾಂಗ್ರೆಸ್ ರಾಜ್ಯಸಭಾ ಅಭ್ಯರ್ಥಿ ಅಸ್ಕರ್ ಫರ್ನಾಂಡಿಸ್ ಹೇಳಿದ್ದಾರೆ.
 
ನಾನು ರಾಜ್ಯದ ಅಭಿವೃದ್ಧಿಗಾಗಿ ಯಾವುದೇ ಕೆಲಸ ಮಾಡಿಲ್ಲವೆನ್ನುವ ಆರೋಪ ಸರಿಯಲ್ಲ. ದೇಶದಲ್ಲಿ ಪ್ರಪ್ರಥಮ ಬಾರಿಗೆ ಉಡುಪಿಯಲ್ಲಿ ಎಸ್‌ಟಿಡಿ ಮತ್ತು ದೂರದರ್ಶನವನ್ನು ಆರಂಭಿಸಿದ್ದೇವೆ. ಕೊಂಕಣ ರೈಲ್ವೆ, ಎಮ್‌ಆರ್‌ಎಲ್‌ಪಿ ಮತ್ತು ರಸಗೊಬ್ಬರ ಕಾರ್ಖಾನೆ ಸೇರಿದಂತೆ ಹೈದ್ರಾಬಾದ್ ಕರ್ನಾಟಕದಲ್ಲೂ ನನ್ನು ಕೊಡುಗೆ ಅಪಾರವಾಗಿದೆ ಎಂದು ಹೇಳಿದ್ದಾರೆ.
 
ರಾಜ್ಯದ ನೆಲ, ಜಲ ಮತ್ತು ಭಾಷೆಯ ಕುರಿತತಂತೆ ನಾನು ಸೇವೆಯನ್ನು ಸಲ್ಲಿಸಿದ್ದೇನೆ. ಕರ್ನಾಟಕದ ಶಾಸ್ತ್ರೀಯ ಸ್ಥಾನಮಾನದಲ್ಲೂ ನನ್ನ ಕೊಡುಗೆ ಅಪಾರವಾಗಿದೆ. ಸುಖಾಸುಮ್ಮನೆ ರಾಜ್ಯಕ್ಕೆ ನನ್ನ ಕೊಡುಗೆ ಇಲ್ಲ ಎಂದು ಆರೋಪಿಸುವುದು ಸರಿಯಲ್ಲ ಎಂದರು. 
 
ಕರ್ನಾಟಕ ರಾಜ್ಯದಿಂದ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಕನ್ನಡಿಗರನ್ನೆ ಕಣಕ್ಕಿಳಿಸಿದೆ. ಬೇರೆ ಪಕ್ಷಗಳ ಕುರಿತು ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಹೊರ ರಾಜ್ಯದವರನ್ನು ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆ ಮಾಡುವುದರಲ್ಲಿ ತಪ್ಪಿಲ್ಲ ಎಂದು ಕಾಂಗ್ರೆಸ್ ರಾಜ್ಯಸಭಾ ಅಭ್ಯರ್ಥಿ ಅಸ್ಕರ್ ಫರ್ನಾಂಡಿಸ್ ಹೇಳಿದ್ದಾರೆ.


ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments