Webdunia - Bharat's app for daily news and videos

Install App

ರಾಜ್ಯಕ್ಕೆ ಕೊಡುಗೆ ನೀಡಿಲ್ಲವೆಂಬ ಆರೋಪ ಶುದ್ಧ ಸುಳ್ಳು: ಆಸ್ಕರ್ ಫರ್ನಾಂಡಿಸ್

Webdunia
ಮಂಗಳವಾರ, 31 ಮೇ 2016 (16:11 IST)
ನಾನು ಕರ್ನಾಟಕ ರಾಜ್ಯಕ್ಕಾಗಿ ಯಾವುದೇ ಕೊಡುಗೆ ನೀಡಿಲ್ಲವೆಂಬ ಆರೋಪ ಶುದ್ಧ ಸುಳ್ಳು ಎಂದು ಕಾಂಗ್ರೆಸ್ ರಾಜ್ಯಸಭಾ ಅಭ್ಯರ್ಥಿ ಅಸ್ಕರ್ ಫರ್ನಾಂಡಿಸ್ ಹೇಳಿದ್ದಾರೆ.
 
ನಾನು ರಾಜ್ಯದ ಅಭಿವೃದ್ಧಿಗಾಗಿ ಯಾವುದೇ ಕೆಲಸ ಮಾಡಿಲ್ಲವೆನ್ನುವ ಆರೋಪ ಸರಿಯಲ್ಲ. ದೇಶದಲ್ಲಿ ಪ್ರಪ್ರಥಮ ಬಾರಿಗೆ ಉಡುಪಿಯಲ್ಲಿ ಎಸ್‌ಟಿಡಿ ಮತ್ತು ದೂರದರ್ಶನವನ್ನು ಆರಂಭಿಸಿದ್ದೇವೆ. ಕೊಂಕಣ ರೈಲ್ವೆ, ಎಮ್‌ಆರ್‌ಎಲ್‌ಪಿ ಮತ್ತು ರಸಗೊಬ್ಬರ ಕಾರ್ಖಾನೆ ಸೇರಿದಂತೆ ಹೈದ್ರಾಬಾದ್ ಕರ್ನಾಟಕದಲ್ಲೂ ನನ್ನು ಕೊಡುಗೆ ಅಪಾರವಾಗಿದೆ ಎಂದು ಹೇಳಿದ್ದಾರೆ.
 
ರಾಜ್ಯದ ನೆಲ, ಜಲ ಮತ್ತು ಭಾಷೆಯ ಕುರಿತತಂತೆ ನಾನು ಸೇವೆಯನ್ನು ಸಲ್ಲಿಸಿದ್ದೇನೆ. ಕರ್ನಾಟಕದ ಶಾಸ್ತ್ರೀಯ ಸ್ಥಾನಮಾನದಲ್ಲೂ ನನ್ನ ಕೊಡುಗೆ ಅಪಾರವಾಗಿದೆ. ಸುಖಾಸುಮ್ಮನೆ ರಾಜ್ಯಕ್ಕೆ ನನ್ನ ಕೊಡುಗೆ ಇಲ್ಲ ಎಂದು ಆರೋಪಿಸುವುದು ಸರಿಯಲ್ಲ ಎಂದರು. 
 
ಕರ್ನಾಟಕ ರಾಜ್ಯದಿಂದ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಕನ್ನಡಿಗರನ್ನೆ ಕಣಕ್ಕಿಳಿಸಿದೆ. ಬೇರೆ ಪಕ್ಷಗಳ ಕುರಿತು ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಹೊರ ರಾಜ್ಯದವರನ್ನು ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆ ಮಾಡುವುದರಲ್ಲಿ ತಪ್ಪಿಲ್ಲ ಎಂದು ಕಾಂಗ್ರೆಸ್ ರಾಜ್ಯಸಭಾ ಅಭ್ಯರ್ಥಿ ಅಸ್ಕರ್ ಫರ್ನಾಂಡಿಸ್ ಹೇಳಿದ್ದಾರೆ.


ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಮುಂದಿನ ಸುದ್ದಿ
Show comments