Select Your Language

Notifications

webdunia
webdunia
webdunia
webdunia

ನಾನೂ ನಿವೃತ್ತಿಯ ಅಂಚಿನಲ್ಲಿದ್ದೇನೆ– ಸಿದ್ದರಾಮಯ್ಯ

ನಾನೂ ನಿವೃತ್ತಿಯ ಅಂಚಿನಲ್ಲಿದ್ದೇನೆ– ಸಿದ್ದರಾಮಯ್ಯ
ರಾಯಚೂರು , ಶನಿವಾರ, 16 ಡಿಸೆಂಬರ್ 2017 (20:04 IST)
ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಅವರಂತೆ ನಾನೂ ನಿವೃತ್ತಿಯ ಅಂಚಿನಲ್ಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೋನಿಯಾ ಗಾಂಧಿ ಅವರು ಅಧ್ಯಕ್ಷೆ ಹುದ್ದೆಯಿಂದ ನಿವೃತ್ತಿಯಾಗುತ್ತಿದ್ದಾರೆ. ರಾಜಕೀಯದಿಂದ ನಿವೃತ್ತಿಯಾಗುತ್ತೇನೆ ಎಂದು ಹೇಳಿಲ್ಲ ಎಂದು ತಿಳಿಸಿದ್ದಾರೆ.

ಕಳೆದ ಬಾರಿಯೇ ಚುನಾವಣೆಗೆ ಸ್ಪರ್ಧಿಸಬಾರದು ಎಂದುಕೊಂಡಿದ್ದೆ, ಬಿಜೆಪಿಯವರ ಕೋಮುವಾದ ನೋಡಿ ಮತ್ತೆ ಸ್ಪರ್ಧಿಸಿದ್ದೆ. ಮುಂಬರುವ ವಿಧಾನಸಭೆ ಚುನಾವಣೆಯ ಬಳಕ ಮತ್ತೆ ಸ್ಪರ್ಧೆ ಮಾಡಲ್ಲ. ಆದರೆ, ರಾಜಕೀಯದಲ್ಲಿ ಸಕ್ರೀಯವಾಗಿರುತ್ತೇನೆ ಎಂದಿದ್ದಾರೆ.

ವರುಣಾ ಕ್ಷೇತ್ರದಿಂದ ಸೋಲುತ್ತೇನೆ ಎಂಬುದು ಸುಳ್ಳು. ನಾನು ಎಲ್ಲೇ ನಿಂತ್ರು ಗೆಲ್ಲುತ್ತೇನೆ. ಆದರೆ, ರಾಜಕೀಯ ಮರುಜೀವ ಪಡೆದಿರುವ ಚಾಮುಂಡೇಶ್ವರಿ ಕ್ಷೇತ್ರದಿಂದ ಕೊನೆಯ ಬಾರಿಗೆ ಸ್ಪರ್ಧಿಸಬೇಕು ಎಂದು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿಯ ಮೇಲೆ ಬಲತ್ಕಾರಕ್ಕೆ ಯತ್ನಿಸಿದಕ್ಕೆ ಪತಿ ಪ್ರತಿಕ್ರಿಯೆ ಏನು ಗೊತ್ತಾ?